5:08 PM Thursday23 - July 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು