6:10 AM Saturday13 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು