7:37 PM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು