7:46 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು