10:47 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು