8:45 AM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು