7:47 AM Friday27 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು