10:55 AM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ನೆರೆಪೀಡಿತ ಕಂದಾವರ ಗ್ರಾಮಕ್ಕೆ ಎನ್ ಡಿಆರ್ ಎಫ್ ತಂಡ: ಶಾಸಕ ಡಾ. ಭರತ್ ಶೆಟ್ಟಿ ಸಾಥ್; ಸಂತ್ರಸ್ತರ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

01/08/2024, 21:25

ಸುರತ್ಕಲ್(reporterkarnataka.com): ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ನೆರೆಪೀಡಿತ ಕಂದಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆದ್ಯಪಾಡಿಯ ಕುದ್ರು ಮತ್ತು ದೇವಂಗಲ ಗುಡ್ಡೆ ಭಾಗದಲ್ಲಿ ತೊಂದರೆಗೆ ಸಿಲುಕಿದ್ದ ಸುಮಾರು 25 ಕುಟುಂಬ ಹಾಗೂ 15 ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಶಾಸಕ ಡಾ.ಭರತ್ ಶೆಟ್ಟಿ ವೈ. ನೇತೃತ್ವದಲ್ಲಿ ಎನ್ ಡಿ ಆರ್ ಎಫ್ ತಂಡವು ಸ್ಥಳಕ್ಕೆ ಧಾವಿಸಿ ಸುರಕ್ಷತೆಯ ಕ್ರಮ ಕೈಗೊಂಡಿದೆ.
ಪಂಚಾಯತ್ ವತಿಯಿಂದ ಎಲ್ಲಾ ತಕ್ಷಣದ ವ್ಯವಸ್ಥೆ ಮಾಡಲಾಗುತ್ತಿದೆ.
ಡಾ.ಭರತ್ ಶೆಟ್ಟಿ ವೈ ಅವರು ದೋಣಿ ಮೂಲಕವೇ ಸಂಚರಿಸಿ ನದಿ ಒಳಹರಿವಿನ ಪ್ರಮಾಣ ಹೆಚ್ಚುತ್ತಿದ್ದು, ಸ್ಥಳಾಂತರ ಮಾಡುವಂತೆ ಮನೆಯವರಲ್ಲಿ ಮನವಿ ಮಾಡಿದರು.


ಮನೆಯಲ್ಲಿನ ಹಸು, ಪ್ರಾಣಿಗಳನ್ನು ತೊರೆದು ಹೋಗಲು ಹಲವು ಮಂದಿ ನಿರಾಕರಿಸಿದರಾದರೂ‌, ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವ ಬಗ್ಗೆ ಎಚ್ಚರಿಕೆ ನೀಡಿ ಮನವೊಲಿಸಲಾಯಿತು.
ಜಿಲ್ಲಾ ಪಂಚಾಯತ್ ವತಿಯಿಂದ ದನಕರುಗಳ ಸುರಕ್ಷತೆಗೂ ಕ್ರಮ ಕೈಗೊಳ್ಳಲಾಯಿತು.
ಸಹಾಯಕ ಆಯುಕ್ತ ಹರ್ಷವರ್ಧನ, ತಹಶೀಲ್ದಾರ್, ಕಂದಾಯ, ಗ್ರಾಮ ಪಂಚಾಯತ್ ಅಧಿಕಾರಿಗಳು ಶಾಸಕರ ಜತೆಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು