1:08 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ

09/02/2022, 10:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ.  ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ  ಪರಿಹಾರ ದೊರೆತಿಲ್ಲ. ನೆರೆಪೀಡಿತ  ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನಿನ್ನೆ ಸೆಗುಣಶಿ ಗ್ರಾಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಶೇಗುಣಸಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದ ಶಾಸಕ ಮಹೇಶ್ ಕುಮಟಳ್ಳಿ ಗ್ರಾಮಸ್ಥರ ಸಮಸ್ಯೆ ಅರಿತು ಸ್ಥಳದಲ್ಲಿ ಅಥಣಿ ತಾಲೂಕ  ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರನ್ನ ಕರೆಸಿ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಭರವಸೆ ನೀಡಿ ಹೋರಾಟ ಹಿಂಪಡೆದು ಶಾಂತಿ ಕಾಪಾಡಲು ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಸುರೇಶ್ ಪಾಟೀಲ್ ಶಾಸಕರ ಮಾತಿಗೆ ಓಗೊಟ್ಟು ಹೋರಾಟ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇದೆ ಸಂಧರ್ಭದಲ್ಲಿ ಮುಖಂಡರಾದ ಅವಿನಾಶ ಗುರುಸ್ವಾಮಿ, ಅಶೋಕ್ ಗೌಡಪ್ಪನವರ, ಸಂಜು ಕರಗಾವಿ, ದಯಾನಂದ ಮೊಪಗಾರ್,
ಚಿದಾನಂದ್ ಪಾನಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು