9:20 AM Sunday22 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ

09/02/2022, 10:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ.  ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ  ಪರಿಹಾರ ದೊರೆತಿಲ್ಲ. ನೆರೆಪೀಡಿತ  ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನಿನ್ನೆ ಸೆಗುಣಶಿ ಗ್ರಾಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಶೇಗುಣಸಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದ ಶಾಸಕ ಮಹೇಶ್ ಕುಮಟಳ್ಳಿ ಗ್ರಾಮಸ್ಥರ ಸಮಸ್ಯೆ ಅರಿತು ಸ್ಥಳದಲ್ಲಿ ಅಥಣಿ ತಾಲೂಕ  ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರನ್ನ ಕರೆಸಿ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಭರವಸೆ ನೀಡಿ ಹೋರಾಟ ಹಿಂಪಡೆದು ಶಾಂತಿ ಕಾಪಾಡಲು ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಸುರೇಶ್ ಪಾಟೀಲ್ ಶಾಸಕರ ಮಾತಿಗೆ ಓಗೊಟ್ಟು ಹೋರಾಟ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇದೆ ಸಂಧರ್ಭದಲ್ಲಿ ಮುಖಂಡರಾದ ಅವಿನಾಶ ಗುರುಸ್ವಾಮಿ, ಅಶೋಕ್ ಗೌಡಪ್ಪನವರ, ಸಂಜು ಕರಗಾವಿ, ದಯಾನಂದ ಮೊಪಗಾರ್,
ಚಿದಾನಂದ್ ಪಾನಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು