9:53 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ

09/02/2022, 10:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ.  ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ  ಪರಿಹಾರ ದೊರೆತಿಲ್ಲ. ನೆರೆಪೀಡಿತ  ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನಿನ್ನೆ ಸೆಗುಣಶಿ ಗ್ರಾಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಶೇಗುಣಸಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದ ಶಾಸಕ ಮಹೇಶ್ ಕುಮಟಳ್ಳಿ ಗ್ರಾಮಸ್ಥರ ಸಮಸ್ಯೆ ಅರಿತು ಸ್ಥಳದಲ್ಲಿ ಅಥಣಿ ತಾಲೂಕ  ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರನ್ನ ಕರೆಸಿ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಭರವಸೆ ನೀಡಿ ಹೋರಾಟ ಹಿಂಪಡೆದು ಶಾಂತಿ ಕಾಪಾಡಲು ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಸುರೇಶ್ ಪಾಟೀಲ್ ಶಾಸಕರ ಮಾತಿಗೆ ಓಗೊಟ್ಟು ಹೋರಾಟ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇದೆ ಸಂಧರ್ಭದಲ್ಲಿ ಮುಖಂಡರಾದ ಅವಿನಾಶ ಗುರುಸ್ವಾಮಿ, ಅಶೋಕ್ ಗೌಡಪ್ಪನವರ, ಸಂಜು ಕರಗಾವಿ, ದಯಾನಂದ ಮೊಪಗಾರ್,
ಚಿದಾನಂದ್ ಪಾನಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು