5:53 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ

09/02/2022, 10:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ.  ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ  ಪರಿಹಾರ ದೊರೆತಿಲ್ಲ. ನೆರೆಪೀಡಿತ  ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನಿನ್ನೆ ಸೆಗುಣಶಿ ಗ್ರಾಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಶೇಗುಣಸಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದ ಶಾಸಕ ಮಹೇಶ್ ಕುಮಟಳ್ಳಿ ಗ್ರಾಮಸ್ಥರ ಸಮಸ್ಯೆ ಅರಿತು ಸ್ಥಳದಲ್ಲಿ ಅಥಣಿ ತಾಲೂಕ  ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರನ್ನ ಕರೆಸಿ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಭರವಸೆ ನೀಡಿ ಹೋರಾಟ ಹಿಂಪಡೆದು ಶಾಂತಿ ಕಾಪಾಡಲು ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಸುರೇಶ್ ಪಾಟೀಲ್ ಶಾಸಕರ ಮಾತಿಗೆ ಓಗೊಟ್ಟು ಹೋರಾಟ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇದೆ ಸಂಧರ್ಭದಲ್ಲಿ ಮುಖಂಡರಾದ ಅವಿನಾಶ ಗುರುಸ್ವಾಮಿ, ಅಶೋಕ್ ಗೌಡಪ್ಪನವರ, ಸಂಜು ಕರಗಾವಿ, ದಯಾನಂದ ಮೊಪಗಾರ್,
ಚಿದಾನಂದ್ ಪಾನಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು