6:24 PM Saturday12 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ

09/02/2022, 10:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ.  ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ  ಪರಿಹಾರ ದೊರೆತಿಲ್ಲ. ನೆರೆಪೀಡಿತ  ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನಿನ್ನೆ ಸೆಗುಣಶಿ ಗ್ರಾಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಶೇಗುಣಸಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದ ಶಾಸಕ ಮಹೇಶ್ ಕುಮಟಳ್ಳಿ ಗ್ರಾಮಸ್ಥರ ಸಮಸ್ಯೆ ಅರಿತು ಸ್ಥಳದಲ್ಲಿ ಅಥಣಿ ತಾಲೂಕ  ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರನ್ನ ಕರೆಸಿ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಭರವಸೆ ನೀಡಿ ಹೋರಾಟ ಹಿಂಪಡೆದು ಶಾಂತಿ ಕಾಪಾಡಲು ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಸುರೇಶ್ ಪಾಟೀಲ್ ಶಾಸಕರ ಮಾತಿಗೆ ಓಗೊಟ್ಟು ಹೋರಾಟ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇದೆ ಸಂಧರ್ಭದಲ್ಲಿ ಮುಖಂಡರಾದ ಅವಿನಾಶ ಗುರುಸ್ವಾಮಿ, ಅಶೋಕ್ ಗೌಡಪ್ಪನವರ, ಸಂಜು ಕರಗಾವಿ, ದಯಾನಂದ ಮೊಪಗಾರ್,
ಚಿದಾನಂದ್ ಪಾನಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು