8:20 AM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯ: ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಕುಮಟಳ್ಳಿ

09/02/2022, 10:46

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ನೆರೆ ಸಂತ್ರಸ್ತರ ಮನೆ ಹಂಚುವಿಕೆಯಲ್ಲಿ ತಾರತಮ್ಯವಾಗಿದೆ.  ಒಂದೇ ಕುಟುಂಬದಲ್ಲಿ 4-5 ಮನೆ ಮುಂಜೂರಾಗಿವೆ. ನೆರೆ ಸಂತ್ರಸ್ತರಿಗೆ ಸೂಕ್ತ ಬೆಳೆ  ಪರಿಹಾರ ದೊರೆತಿಲ್ಲ. ನೆರೆಪೀಡಿತ  ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆಯಾಗಬೇಕು ಹಾಗೂ ಶಾಶ್ವತ ಪರಿಹಾರ ಘೋಷಣೆ ಯಾಗಬೇಕು ಇಲ್ಲವಾದಲ್ಲಿ ಸುರೇಶ ಪಾಟೀಲ್ ನೇತೃತ್ವದಲ್ಲಿ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ನಿನ್ನೆ ಸೆಗುಣಶಿ ಗ್ರಾಮದಲ್ಲಿ ಗೊಂದಲ ಸೃಷ್ಟಿಯಾಗಿತ್ತು.

ಶೇಗುಣಸಿ ಗ್ರಾಮದ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದ ಶಾಸಕ ಮಹೇಶ್ ಕುಮಟಳ್ಳಿ ಗ್ರಾಮಸ್ಥರ ಸಮಸ್ಯೆ ಅರಿತು ಸ್ಥಳದಲ್ಲಿ ಅಥಣಿ ತಾಲೂಕ  ದಂಡಾಧಿಕಾರಿ  ದುಂಡಪ್ಪ ಕೋಮಾರ ಅವರನ್ನ ಕರೆಸಿ ಸೂಕ್ತ ಫಲಾನುಭವಿಗಳಿಗೆ ಮನೆ ಹಂಚಿಕೆ ಮಾಡುವುದಾಗಿ ಭರವಸೆ ನೀಡಿ ಹೋರಾಟ ಹಿಂಪಡೆದು ಶಾಂತಿ ಕಾಪಾಡಲು ಮನವಿ ಮಾಡಿದರು.

ಇದೇ ಸಂಧರ್ಭದಲ್ಲಿ ಸುರೇಶ್ ಪಾಟೀಲ್ ಶಾಸಕರ ಮಾತಿಗೆ ಓಗೊಟ್ಟು ಹೋರಾಟ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದರು.

ಇದೆ ಸಂಧರ್ಭದಲ್ಲಿ ಮುಖಂಡರಾದ ಅವಿನಾಶ ಗುರುಸ್ವಾಮಿ, ಅಶೋಕ್ ಗೌಡಪ್ಪನವರ, ಸಂಜು ಕರಗಾವಿ, ದಯಾನಂದ ಮೊಪಗಾರ್,
ಚಿದಾನಂದ್ ಪಾನಶೆಟ್ಟಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು