8:13 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರಿಗೆ ಸರಕಾರ ಪರಿಹಾರದ ನೀಡದಿದ್ದರೆ, ನನ್ನ ಜೇಬಿನಿಂದ ಹಣ ನೀಡುತ್ತೇನೆ: ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ 

01/09/2021, 11:16

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕಳೆದ ತಿಂಗಳು ಚಿಕ್ಕೋಡಿ ಉಪವಿಭಾಗದ ಕ್ಷೇತ್ರವಾದ ಕಾಗವಾಡ ತಾಲೂಕಿನಲ್ಲಿ ಕೃಷ್ಣಾ ನದಿ ಪ್ರವಾಹದಿಂದ ನದಿ ಪಾತ್ರದ ಜನರಿಗೆ ಬಾರಿ ಪ್ರಮಾಣ ಹಾನಿ ಸಂಭವಿಸಿದ್ದು, ಸರ್ಕಾರ ಪರಿಹಾರ ವಿತರಣೆ ಮಾಡದೆ ಹೋದರೆ ನನ್ನ ವೈಯಕ್ತಿಕ ಹಣವನ್ನು ನೆರೆ ಸಂತ್ರಸ್ತರಿಗೆ ವಿತರಣೆ ಮಾಡುತ್ತೇನೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಹೇಳಿದರು.

ಅವರು ಕಾಗವಾಡ ಕಚೇರಿಯಲ್ಲಿ ಮಾದ್ಯಮ ಜತೆ ಮಾತನಾಡಿ, ಈಗಾಗಲೇ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿಗೆ ಬೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳಿಗೆ ಆದೇಶ ಮಾಡಿದ್ದಾರೆ. ಆದರೆ ಕೆಲವು ಕಾನೂನಾತ್ಮಕ ತೊಂದರೆಯಿಂದಾಗಿ ಕೆಲವು ನೆರೆ ಸಂತ್ರಸ್ತರಿಗೆ ತುರ್ತಾಗಿ ಹತ್ತು ಸಾವಿರ ರೂಪಾಯಿ ಧನಸಹಾಯ ಸಿಕ್ಕಿಲ್ಲ, ಇದರಿಂದ ಕೆಲವು ಗ್ರಾಮದಲ್ಲಿ ಪ್ರತಿಭಟನೆ ಮುಂದಾಗಿದ್ದು ಅವರಿಗೆ ಸರ್ಕಾರದಿಂದ ಪರಿಹಾರ ಧನ ಸಹಾಯ ಮಾಡಲಾಗುತ್ತದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು