2:38 PM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ನೆರೆ ಸಂತ್ರಸ್ತರೊಂದಿಗೆ ಸುವರ್ಣ ಸೌಧಕ್ಕೆ ಮುತ್ತಿಗೆ: ಸರಕಾರಕ್ಕೆ ಕಾಂಗ್ರೆಸ್ ಎಚ್ಚರಿಕೆ

02/12/2022, 10:27

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಜಿಲ್ಲೆಯ ಅಥಣಿ ತಾಲೂಕಿನ ಕೃಷ್ಣಾ ನದಿ ನೆರೆ ಸಂತ್ರಸ್ತರಿಗೆ ಡಿ.19ರ ಒಳಗಾಗಿ ಹಕ್ಕುಪತ್ರ ನೀಡದಿದ್ದರೆ ನೆರೆ ಸಂತ್ರಸ್ತರೊಂದಿಗೆ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವದು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ತಾಲೂಕಿನ ರಡ್ಡೇರಹಟ್ಟಿ ಗ್ರಾಮದಲ್ಲಿ ವಾಸವಿರುವ ನಾಗನೂರ ಪಿ.ಕೆ. ಗ್ರಾಮದ 53 ಕುಟುಂಬಗಳಿಗೆ ಇಂದು ಸಂಜೆ ಆಹಾರ ಕಿಟ್ ವಿತರಿಸಿ ಮಾತನಾಡಿದ ಅವರು, ಕಳೆದ 18 ವರ್ಷಗಳಿಂದ ಮನೆ ಕಳೆದುಕೊಂಡು ನಿರ್ಗತಿಕರಾಗಿ ರಡ್ಡೇರಹಟ್ಟಿ ಗ್ರಾಮದಲ್ಲಿ ತಾತ್ಕಾಲಿಕ ಶೆಡ್ ಹೊಡೆದು ವಾಸವಿರುವ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಣೆ ಮಾಡಿಲ್ಲ, ಮಳೆ ಬಂತೆಂದರೆ ಮಡ್ಡಿ ಬಸವಣ್ಣ ದೇವರ ಸಮುದಾಯ ಭವನದಲ್ಲಿ ಇವರ ವಾಸ ಅನಿವಾರ್ಯವಾಗಿದೆ. ಪಡಿತರ ಆಹಾರ ತರಲು ರಡ್ಡೇರಹಟ್ಟಿಯಿಂದ ನಾಗನೂರ ಪಿ.ಕೆ ಗ್ರಾಮಕ್ಕೆ ಸುಮಾರು 5 ಕಿಮೀ ದೂರ ಪ್ರಯಾಣಿಸಬೇಕು. 15 ವರ್ಷಗಳ ಕಾಲ ಶಾಸಕರಾಗಿ ಮಂತ್ರಿಗಳಾಗಿ ಉಪಮುಖ್ಯಮಂತ್ರಿ ಹುದ್ಧೆ ಅಲಂಕರಿಸಿದ ಲಕ್ಷ್ಮಣ ಸವದಿಯವರ ಸ್ವಗ್ರಾಮದ ಸಂತ್ರಸ್ತರ ಗತಿ ಈ ರೀತಿಯಾದರೆ ಉಳಿದವರ ಪಾಡೇನು? ಶಾಸಕ ಮಹೇಶ ಕುಮಠಳ್ಳಿ ಸಾವಿರಾರು ಕೋಟಿ ಅನುದಾನ ತಂದಿರುವದಾಗಿ ಹೇಳುತ್ತಿದ್ದು, ಅದು ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.


ಇದೇ 19 ರೊಳಗೆ ನೆರೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡಿ ಮನೆ ನಿರ್ಮಿಸಿಕೊಡಬೇಕು ಇಲ್ಲದಿದ್ದರೆ, ನಾಗನೂರ.ಪಿ.ಕೆ ಗ್ರಾಮದಿಂದ ಬೆಳಗಾವಿ ಸುವರ್ಣಸೌದವರೆಗೆ ಸಂತ್ರರೊಂದಿಗೆ ಪಾದಯಾತ್ರೆ ಕೈಗೊಳ್ಳಲಾಗುವದು ಎಂದರು.

ಜಿಲ್ಲಾ ಕಾಂಗ್ರೆಸ್ ಕಿಸಾನ್ ಫಟಕದ ಅಧ್ಯಕ್ಷ ಶಿವು ಗುಡ್ಡಾಪುರ ಮಾತನಾಡಿ, ಮನೆಗೆದ್ದು ಮಾರುಗೆದ್ದ ಎಂಬ ನಾಣ್ಣುಡಿ ಇದೆ ಸ್ವಂತ ಊರಿನ ಜನರಿಗೆ ನ್ಯಾಯ ಒದಗಿಸುವಲ್ಲಿ ಲಕ್ಷ್ಮಣ ಸವದಿ ವಿಫಲರಾಗಿದ್ದು ಅವರಲ್ಲಿ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ ಎಂದರು.

ಈ ವೇಳೆ ಮುಖಂಡರಾದ ಸುನೀಲ ಸಂಕ, ಸಿದ್ಧಾರ್ಥ ಶಿಂಗೆ, ರಾವಸಾಬ ಐಹೊಳೆ, ಶ್ರೀಕಾಂತ ಪೂಜಾರಿ, ಭೀಮಪ್ಪ ಯಕ್ಕುಂಡಿ, ರಮೇಶ ಪವಾರ, ಬಸವರಾಜ ಬುಟಾಳಿ, ಶಂಕರ ಮಗದುಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು