9:44 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ನಿರ್ಲಕ್ಷ್ಯ ಚಾಲನೆ, ಕರ್ಕಶ ಹಾರ್ನ್: ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಣಖಲು

21/06/2023, 21:55

ಮಂಗಳೂರು(reporterkarnataka.com): ಮುಡಿಪುನಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸಿನ ಚಾಲಕನ ನಿರ್ಲಕ್ಷ್ಯ ಚಾಲನೆ ಮತ್ತು ಕರ್ಕಶ ಹಾರ್ನ್ ಹಾಕಿದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ.

KA51AC7835 ನಂಬರಿನ ಗೋಪಾಲಕೃಷ್ಣ ಬಸ್ಸಿನ ಚಾಲಕ ತ್ಯಾಗರಾಜ ಎಂಬಾತ ಜೂನ್ 20ರಂದು ಮಧ್ಯಾಹ್ನ 12 ಗಂಟೆಗೆ ಮುಡಿಪು ಕಡೆಯಿಂದ ತೌಡಗೋಳಿ ಮಾರ್ಗವಾಗಿ ಮಂಗಳೂರು ಕಡೆಗೆ ದುಡುಕುತನ ಹಾಗೂ ನಿರ್ಲಕ್ಷ ತನದಿಂದ ಸಾರ್ವಜನಿಕ ರಸ್ತೆಯಲ್ಲಿ ಮಾನವ ಜೀವಕ್ಕೆ ಹಾನಿಯಾಗುವ ರೀತಿಯಲ್ಲಿ ಕರ್ಕಶ ಹಾರ್ನ್ ಹಾಕುತ್ತಾ ಬಸ್ಸನ್ನು ಚಲಾಯಿಸಿದ್ದರಿಂದ ಆತನ ಮೇಲೆ ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಮಂಗಳೂರು ನಗರದೊಳಗೆ ಕೂಡ ಕರ್ಕಶ ಹಾರ್ನ್ ಮತ್ತು ನಿರ್ಲಕ್ಷ್ಯ ಚಾಲನೆಯ ಸಮಸ್ಯೆ ಕಾಡುತ್ತಿದೆ. ನಗರದೊಳಗೆ ಪ್ರವೇಶಿಸುತ್ತಿದ್ದಂತೆ ಖಾಸಗಿ ಸರ್ವಿಸ್ ಮತ್ತು ಸಿಟಿ ಬಸ್ ಗಳ ವೇಗ ತಗ್ಗಬೇಕಾಗಿದ್ದರೂ ಹೆಚ್ಚಿನ ಬಸ್ ಚಾಲಕರು ವೇಗವನ್ನು ಹೆಚ್ಚಿಸುತ್ತಾರೆ. ಅದಲ್ಲದೆ ಕರ್ಕಶ ಹಾರ್ನ್ ಗಳ ಹಾವಳಿ ವಿಪರೀತವಾಗಿದೆ. ದ್ವಿಚಕ್ರ ವಾಹನಗಳನ್ನು ಓವರ್ ಟೇಕ್ ಮಾಡುತ್ತಿದ್ದಂತೆ ಕರ್ಕಶ ಹಾರ್ನ್ ಒತ್ತುವ ಚಾಲಕರು ನಮ್ಮಲ್ಲಿ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಇದಕ್ಕೆ ಟ್ರಾಫಿಕ್ ಪೊಲೀಸರು ಕಡಿವಾಣ ಹಾಕುವ ಅಗತ್ಯವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು