2:53 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನೇತಾಜಿ ಜನ್ಮದಿನ: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲದಿಂದ ರಕ್ತದಾನ ಶಿಬಿರ

23/01/2022, 15:03

ಮಂಗಳೂರು(reporterkarnataka.com): ಸಮಾಜ ಸೇವಾ ಸಂಘಟನೆಗಳಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಿರುವೆರ್ ಕುಡ್ಲ ಆಶ್ರಯದಲ್ಲಿ

ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆನರಾ ಹೈಸ್ಕೂಲ್ ನ ಭುವನೇಂದ್ರ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಾತನಾಡಿ, ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ)

ನಿರಂತರ ರಕ್ತದಾನ ಶಿಬಿರ ಆಯೋಜಿಸಿ ಮಾದರಿ ಕೆಲಸ ಮಾಡುತ್ತಿದೆ. ಸಮಾನ ಮನಸ್ಕ ಯುವಕರ ತಂಡ  ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿ ಸಮಾಜ ಕಟ್ಟುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ನ  ನರೇಶ್ ಶೆಣೈ, ಹನುಮಂತ್ ಕಾಮತ್, ಬಿರುವೆರ್ ಕುಡ್ಲ(ರಿ) ಸ್ಥಾಪಕ ಅಧ್ಯಕ್ಷ

ಉದಯ್ ಪೂಜಾರಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ನರೇಶ್ ಪ್ರಭು, ಚೇತನ್ ಕಾಮತ್, ಬಿರುವೆರ್ ಕುಡ್ಲ(ರಿ) ಉಪಾಧ್ಯಕ್ಷ ರಾಕೇಶ್ ಸಾಲಿಯಾನ್ ಚಿಲಿಂಬಿ, ಕಿಶೋರ್ ಬಾಬು, ರಜತ್ ಕುಲಾಲ್,ಬಿರುವೆರ್ ಕುಡ್ಲ(ರಿ)ಅಶೋಕ ನಗರ ಸಂಚಾಲಕಿ ಸುಮಂಗಲ ಸಿ. ಕೋಟ್ಯಾನ್, ನೀರೀಕ್ಷಾ, ಅಶ್ವಿತಾ ಅಮೀನ್, ಕಾಳಿಚರಣ್ ನ ಅನಿಲ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು