1:47 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನೇತಾಜಿ ಜನ್ಮದಿನ: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲದಿಂದ ರಕ್ತದಾನ ಶಿಬಿರ

23/01/2022, 15:03

ಮಂಗಳೂರು(reporterkarnataka.com): ಸಮಾಜ ಸೇವಾ ಸಂಘಟನೆಗಳಾಗಿರುವ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಿರುವೆರ್ ಕುಡ್ಲ ಆಶ್ರಯದಲ್ಲಿ

ಸ್ವಾತಂತ್ರ ಸೇನಾನಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ಕೆನರಾ ಹೈಸ್ಕೂಲ್ ನ ಭುವನೇಂದ್ರ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಾತನಾಡಿ, ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ಮತ್ತು ಬಿರುವೆರ್ ಕುಡ್ಲ(ರಿ)

ನಿರಂತರ ರಕ್ತದಾನ ಶಿಬಿರ ಆಯೋಜಿಸಿ ಮಾದರಿ ಕೆಲಸ ಮಾಡುತ್ತಿದೆ. ಸಮಾನ ಮನಸ್ಕ ಯುವಕರ ತಂಡ  ಸಮಾಜ ಮುಖಿ ಕಾರ್ಯದಲ್ಲಿ ತೊಡಗಿಸಿ ಸಮಾಜ ಕಟ್ಟುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಸೇವಾಂಜಲಿ ಚ್ಯಾರಿಟೇಬಲ್ ಟ್ರಸ್ಟ್ ನ  ನರೇಶ್ ಶೆಣೈ, ಹನುಮಂತ್ ಕಾಮತ್, ಬಿರುವೆರ್ ಕುಡ್ಲ(ರಿ) ಸ್ಥಾಪಕ ಅಧ್ಯಕ್ಷ

ಉದಯ್ ಪೂಜಾರಿ, ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ನರೇಶ್ ಪ್ರಭು, ಚೇತನ್ ಕಾಮತ್, ಬಿರುವೆರ್ ಕುಡ್ಲ(ರಿ) ಉಪಾಧ್ಯಕ್ಷ ರಾಕೇಶ್ ಸಾಲಿಯಾನ್ ಚಿಲಿಂಬಿ, ಕಿಶೋರ್ ಬಾಬು, ರಜತ್ ಕುಲಾಲ್,ಬಿರುವೆರ್ ಕುಡ್ಲ(ರಿ)ಅಶೋಕ ನಗರ ಸಂಚಾಲಕಿ ಸುಮಂಗಲ ಸಿ. ಕೋಟ್ಯಾನ್, ನೀರೀಕ್ಷಾ, ಅಶ್ವಿತಾ ಅಮೀನ್, ಕಾಳಿಚರಣ್ ನ ಅನಿಲ್ ಸುವರ್ಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು