3:19 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

New Delhi | ಜನಗಣತಿಯೊಂದಿಗೆ ಜಾತಿ ಗಣತಿ; ಮೋದಿ ಅವರಿಂದ ದಿಟ್ಟ ನಿರ್ಧಾರ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

30/04/2025, 23:03

ನವದೆಹಲಿ(reporterkarnataka.com): ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ನಡೆಸಲು ಕೇಂದ್ರ ಸಂಪುಟ ನಿರ್ಧರಿದ್ದು, ಇದು ಪ್ರಧಾನಿ ನರೇಂದ್ರ ಮೋದಿ ಅವರ ದಿಟ್ಟ ನಿರ್ಧಾರ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಬಣ್ಣಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮುಂಬರುವ ಜನಗಣತಿ ಜೊತೆಯಲ್ಲಿಯೇ ಜಾತಿ ಗಣತಿಯನ್ನೂ ನಡೆಸುವ ಮಹತ್ವದ ನಿರ್ಧಾರವನ್ನು ಮೋದಿಯವರ ನೇತೃತ್ವದಲ್ಲಿ ಕೈಗೊಳ್ಳಲಾಗಿದೆ. ಅವರ ಕ್ರಿಯಾಶೀಲ ನಾಯಕತ್ವದಲ್ಲಿ ಇದು ಐತಿಹಾಸಿಕ ಮತ್ತು ದೂರದೃಷ್ಟಿಯ ನಿರ್ಧಾರವಾಗಿದೆ. ಜಾತಿ ಗಣತಿಯು 1931ರ ನಂತರ ಇದೇ ಮೊದಲ ಬಾರಿಗೆ ಮುಂಬರುವ ರಾಷ್ಟ್ರೀಯ ಜನಗಣತಿಯ ಭಾಗವಾಗಲಿದೆ ಎಂಬುದು ಗಮನಾರ್ಹ ಎಂದಿದ್ದಾರೆ.
ಈ ಮಹತ್ವದ ಹೆಜ್ಜೆಯು ಭಾರತವು ಅಧಿಕೃತ, ವೈಜ್ಞಾನಿಕ ಮತ್ತು ಪಾರದರ್ಶಕವಾದ ಜಾತಿ ದತ್ತಾಂಶ ಹೊಂದಲಿದೆ. ಕೇವಲ ರಾಜಕೀಯ ಪ್ರೇರಿತ ರಾಜ್ಯ ಮಟ್ಟದ ಸಮೀಕ್ಷೆಗಳು ವಿಶ್ವಾಸಾರ್ಹತೆ, ಏಕರೂಪತೆ ಹೊಂದಿರುವುದಿಲ್ಲ ಎಂಬುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಈ ದಿಟ್ಟ ಕ್ರಮದೊಂದಿಗೆ ಪ್ರಧಾನಿ ಮೋದಿ ಅವರು ಸಮಗ್ರ ಆಡಳಿತ ಮತ್ತು ದತ್ತಾಂಶ ಚಾಲಿತ ನೀತಿ ನಿರೂಪಣೆ ಬಗ್ಗೆ ಹೊಂದಿರುವ ತಮ್ಮ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅಲ್ಲದೇ, ಈ ಗಣತಿಯು ಕಲ್ಯಾಣ ಕಾರ್ಯಕ್ರಮಗಳನ್ನು ಬಲಗೊಳಿಸುತ್ತದೆ, ಸಾಮಾಜಿಕ ನ್ಯಾಯವನ್ನು ಇನ್ನಷ್ಟು ಖಚಿತಪಡಿಸುತ್ತದೆ ಹಾಗೂ ಸರ್ವರಿಗೂ ಸಮಾನ ಅವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಈ ನಿರ್ಣಾಯಕ ಮತ್ತು ದೂರದೃಷ್ಟಿಯ ನಿರ್ಧಾರಕ್ಕಾಗಿ ಪ್ರಧಾನಮಂತ್ರಿಯವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಈ ನಿರ್ಧಾರವನ್ನು ನಾನು, ನಮ್ಮ ಪಕ್ಷವು ಸ್ವಾಗತಿಸುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು