7:08 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

New Delhi | ಡಿಸಿಎಂ ಡಿಕೆಶಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್: ಆತಂಕ ಸೃಷ್ಟಿ

25/03/2026, 12:50

ನವದೆಹಲಿ(reporterkarnataka.com): ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕ್ಷಣದಲ್ಲಿ ಏಕಾಏಕಿ ಮತ್ತೆ ಟೇಕ್ ಆಫ್ ಆಗಿರುವ ಆತಂಕಕಾರಿ ಘಟನೆ ನಡೆದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮತ್ತು ಎಂಎಲ್‌ಸಿ ಆರತಿ ಕೃಷ್ಣ ಅವರು ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಸಂಜೆ ಸುಮಾರು 4:55ರ ವೇಳೆಗೆ ವಿಮಾನವು ರನ್ ವೇನಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ, ಚಕ್ರಗಳು ನೆಲಕ್ಕೆ ತಾಗುವ ಮೊದಲೇ ಪೈಲಟ್ ವಿಮಾನವನ್ನು ಮತ್ತೆ ಆಕಾಶಕ್ಕೆ ಹಾರಿಸಿದ್ದಾರೆ.

*ಆತಂಕಕ್ಕೊಳಗಾದ ಪ್ರಯಾಣಿಕರು*
ರನ್ ವೇ ಸಮೀಪ ಬಂದು ಏಕಾಏಕಿ ವಿಮಾನ ಮತ್ತೆ ಟೇಕ್ ಆಫ್ ಆದ ಕಾರಣ ವಿಮಾನದಲ್ಲಿದ್ದ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಕೆಲಕಾಲ ಗೊಂದಲ ಮತ್ತು ಆತಂಕಕ್ಕೊಳಗಾದರು. ಸುಮಾರು 7ರಿಂದ 8 ನಿಮಿಷಗಳ ಕಾಲ ದೆಹಲಿ ಮತ್ತು ಗಾಜಿಯಾಬಾದ್ ಆಕಾಶದಲ್ಲಿ ಸುತ್ತಾಡಿದ ವಿಮಾನವು, ಎರಡನೇ ಬಾರಿಗೆ ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಲ್ಯಾಂಡ್ ಆಯಿತು.

*ಕಾರಣವೇನು?*
ಈ ಘಟನೆಗೆ ನಿಖರವಾದ ಕಾರಣವಿನ್ನೂ ತಿಳಿದು ಬಂದಿಲ್ಲ. ತಾಂತ್ರಿಕ ದೋಷ ಅಥವಾ ಏರ್ ಟ್ರಾಫಿಕ್ ಕಂಟ್ರೋಲ್ (ATC) ನಿಂದ ಸರಿಯಾದ ಸಮಯದಲ್ಲಿ ಅನುಮತಿ ಸಿಗದ ಕಾರಣ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು