1:04 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

New Delhi | ಡಿಸಿಎಂ ಡಿಕೆಶಿ ಪ್ರಯಾಣಿಸುತ್ತಿದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್: ಆತಂಕ ಸೃಷ್ಟಿ

25/03/2026, 12:50

ನವದೆಹಲಿ(reporterkarnataka.com): ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕ್ಷಣದಲ್ಲಿ ಏಕಾಏಕಿ ಮತ್ತೆ ಟೇಕ್ ಆಫ್ ಆಗಿರುವ ಆತಂಕಕಾರಿ ಘಟನೆ ನಡೆದಿದೆ. ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಮತ್ತು ಎಂಎಲ್‌ಸಿ ಆರತಿ ಕೃಷ್ಣ ಅವರು ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಸಂಜೆ ಸುಮಾರು 4:55ರ ವೇಳೆಗೆ ವಿಮಾನವು ರನ್ ವೇನಲ್ಲಿ ಇನ್ನೇನು ಲ್ಯಾಂಡ್ ಆಗಬೇಕು ಎನ್ನುವಷ್ಟರಲ್ಲಿ, ಚಕ್ರಗಳು ನೆಲಕ್ಕೆ ತಾಗುವ ಮೊದಲೇ ಪೈಲಟ್ ವಿಮಾನವನ್ನು ಮತ್ತೆ ಆಕಾಶಕ್ಕೆ ಹಾರಿಸಿದ್ದಾರೆ.

*ಆತಂಕಕ್ಕೊಳಗಾದ ಪ್ರಯಾಣಿಕರು*
ರನ್ ವೇ ಸಮೀಪ ಬಂದು ಏಕಾಏಕಿ ವಿಮಾನ ಮತ್ತೆ ಟೇಕ್ ಆಫ್ ಆದ ಕಾರಣ ವಿಮಾನದಲ್ಲಿದ್ದ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಪ್ರಯಾಣಿಕರು ಕೆಲಕಾಲ ಗೊಂದಲ ಮತ್ತು ಆತಂಕಕ್ಕೊಳಗಾದರು. ಸುಮಾರು 7ರಿಂದ 8 ನಿಮಿಷಗಳ ಕಾಲ ದೆಹಲಿ ಮತ್ತು ಗಾಜಿಯಾಬಾದ್ ಆಕಾಶದಲ್ಲಿ ಸುತ್ತಾಡಿದ ವಿಮಾನವು, ಎರಡನೇ ಬಾರಿಗೆ ಯಶಸ್ವಿಯಾಗಿ ಮತ್ತು ಸುರಕ್ಷಿತವಾಗಿ ಲ್ಯಾಂಡ್ ಆಯಿತು.

*ಕಾರಣವೇನು?*
ಈ ಘಟನೆಗೆ ನಿಖರವಾದ ಕಾರಣವಿನ್ನೂ ತಿಳಿದು ಬಂದಿಲ್ಲ. ತಾಂತ್ರಿಕ ದೋಷ ಅಥವಾ ಏರ್ ಟ್ರಾಫಿಕ್ ಕಂಟ್ರೋಲ್ (ATC) ನಿಂದ ಸರಿಯಾದ ಸಮಯದಲ್ಲಿ ಅನುಮತಿ ಸಿಗದ ಕಾರಣ ಈ ರೀತಿ ಆಗಿರಬಹುದು ಎಂದು ಶಂಕಿಸಲಾಗಿದೆ. ಸದ್ಯಕ್ಕೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು