9:50 PM Thursday19 - February 2026
ಬ್ರೇಕಿಂಗ್ ನ್ಯೂಸ್
Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ…

ಇತ್ತೀಚಿನ ಸುದ್ದಿ

New Delhi | ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆಗೆ ಸಹಿ

19/02/2026, 20:45

ನವದೆಹಲಿ(reporterkarnataka.com): ಜಾಗತಿಕ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಭಾರತ ಬದ್ಧತೆ ಪ್ರದರ್ಶಿಸುತ್ತಿದ್ದು, ಇದೀಗ ಐದು ವರ್ಷಗಳ ಕಾಲ ಅಕ್ಕಿ ಪೂರೈಕೆಗೆ ವಿಶ್ವಸಂಸ್ಥೆ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ಜಾಗತಿಕವಾಗಿ ಹಸಿವು ನೀಗಿಸುವ ಗುರಿಯೊಂದಿಗೆ ಹೆಜ್ಜೆ ಹಾಕಿರುವ ಭಾರತ, ಮಾನವೀಯತೆ ತೋರುವ ಜತೆಗೆ ಆಹಾರ ಪೂರೈಕೆಯಲ್ಲಿ ವಿಶ್ವಕ್ಕೇ ಬೆಂಬಲವಾಗಿ ನಿಂತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅಕ್ಕಿ ಪೂರೈಕೆಗಾಗಿ ಫೆ.18ರಂದು ಭಾರತೀಯ ಆಹಾರ ನಿಗಮ (FCI) ವಿಶ್ವ ಆಹಾರ ಕಾರ್ಯಕ್ರಮ (WFP) ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ ಎಂದಿದ್ದಾರೆ.
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

*2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ:*
ಒಪ್ಪಂದದ ಪ್ರಕಾರ FCI 2 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು (25% ವರೆಗೆ ಮುರಿದ) WFPಗೆ ಪೂರೈಸುತ್ತದೆ. ಈ ಒಪ್ಪಂದ ಇದೇ 2026ರ ಫೆಬ್ರವರಿ 18ರಿಂದ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಅಲ್ಲದೆ, ಭವಿಷ್ಯದಲ್ಲಿ ಪರಸ್ಪರ ಒಪ್ಪಿಗೆ ಮೂಲಕ ವಿಸ್ತರಿಸಲೂಬಹುದು ಎಂದು ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಅಕ್ಕಿ ಬೆಲೆಯನ್ನು ವಾರ್ಷಿಕ ಆಧಾರದ ಮೇಲೆ ಪರಸ್ಪರ ಒಪ್ಪಿಕೊಳ್ಳಲಾಗುತ್ತದೆ. ಪ್ರಸ್ತುತ ಬೆಲೆ ಕ್ವಿಂಟಲ್‌ಗೆ ₹2,800 ಆಗಿದ್ದು, ಇದೇ ಮಾರ್ಚ್ 31ರವರೆಗೆ ಮಾತ್ರ ಈ ಬೆಲೆ ನಿಗದಿಪಡಿಸಿರುತ್ತದೆ ಎಂದಿದ್ದಾರೆ.
“WFP ಜತೆಗಿನ ಪಾಲುದಾರಿಕೆ ಮೂಲಕ ಭಾರತ ಜಗತ್ತಿನಲ್ಲಿ ಹಸಿವನ್ನು ಎದುರಿಸುತ್ತಿರುವವರಿಗೆ ಭರವಸೆಯಾಗಿ ನಿಂತಿದೆ. ಈ ಒಪ್ಪಂದ ಯಾರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳುವ ಭಾರತದ ಸಂಕಲ್ಪವನ್ನು ಪ್ರದರ್ಶಿಸುತ್ತದೆ” ಎಂದು ಪ್ರತಿಪಾದಿಸಿದ್ದಾರೆ ಸಚಿವ ಪ್ರಲ್ಹಾದ ಜೋಶಿ.
ಜಾಗತಿಕವಾಗಿ ಅಪೌಷ್ಟಿಕತೆ ಮತ್ತು ಆಹಾರ ಅಭದ್ರತೆ ಎದುರಿಸುವಲ್ಲಿ ಭಾರತ ಅಂತರಾಷ್ಟ್ರೀಯ ಸಮುದಾಯದೊಂದಿಗೆ ನಿಲ್ಲುವುದನ್ನು ಮುಂದುವರಿಸುತ್ತದೆ. ಭಾರತದ ಈ ಬೆಂಬಲ ಮುಂದಿನ ಐದು ವರ್ಷಗಳಲ್ಲಿ ಪೌಷ್ಟಿಕ ಆಹಾರದೊಂದಿಗೆ ದುರ್ಬಲರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಲು WFP ಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಅಕ್ಕಿ ಪೂರೈಕೆ ಒಪ್ಪಂದಕ್ಕೆ ಸಹಿ ಹಾಕುವ ವೇಳೆ ವಿಶ್ವ ಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮದ ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ, “ಭಾರತದೊಂದಿಗಿನ ಈ ಒಪ್ಪಂದವು ಜಾಗತಿಕ ಹಸಿವಿನ ವಿರುದ್ಧ ಹೋರಾಡುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದಿದ್ದಾರೆ.
ಕೃಷಿ ಪ್ರಧಾನ ರಾಷ್ಟ್ರ ಮತ್ತು ಜಾಗತಿಕ ಒಗ್ಗಟ್ಟಿನ ಪ್ರತಿಪಾದಕವಾಗಿರುವ ಭಾರತ, ಜಾಗತಿಕ ‘ಶೂನ್ಯ ಹಸಿವು ನೀಗಿಸುವ ಗುರಿ’ಯನ್ನು ಕಾರ್ಯರೂಪಕ್ಕೆ ತತರುವಲ್ಲಿ ಸ್ಫೂರ್ತಿ ನೀಡುತ್ತದೆ. ಈ ಪರಿವರ್ತನಾತ್ಮಕ ಪಾಲುದಾರಿಕೆಗಾಗಿ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ ಕಾರ್ಲ್ ಸ್ಕೌ.
ವಿಶ್ವಸಂಸ್ಥೆ ಜತೆಗಿನ ಈ ಪಾಲುದಾರಿಕೆ ಜಾಗತಿಕ ಆಹಾರ ಭದ್ರತೆಗೆ ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. ವಿಶ್ವಾದ್ಯಂತ ಮಾನವೀಯ ಅಗತ್ಯತೆಗಳನ್ನು ಪೂರೈಸುವಲ್ಲಿ WFP ಯೊಂದಿಗೆ ಸಹಕಾರವನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ.
WFP ಮತ್ತು FCI ಒಪ್ಪಂದಕ್ಕೆ ಸಹಿ ಹಾಕುವ ವೇಳೆ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹಾಗು ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು