7:26 AM Monday4 - August 2025
ಬ್ರೇಕಿಂಗ್ ನ್ಯೂಸ್
Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ

ಇತ್ತೀಚಿನ ಸುದ್ದಿ

New Delhi | ಭಾರತ ಜಾಗತಿಕ ಇವಿ ಹಬ್ ಆಗಿ ಪರಿವರ್ತನೆ: ಕೇಂದ್ರ ಸಚಿವ ಕುಮಾರಸ್ವಾಮಿ ವಿಶ್ವಾಸ

14/05/2025, 18:07

ನವದೆಹಲಿ(reporterkarnataka.com): ರಾಷ್ಟ್ರದ ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಉತ್ತೇಜಿಸುವ ನೀತಿ ಕುರಿತಂತೆ ಚರ್ಚಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇವಿ ಕ್ಷೇತ್ರದ ಖಾಸಗಿ ಪಾಲುದಾರರು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು.


ಭಾರತದಲ್ಲಿ ಸ್ವಚ್ಛ, ಮಾಲಿನ್ಯರಹಿತ ಚಲನಶೀಲತೆಯ ಪರಿವರ್ತನೆಯನ್ನು ವೇಗಗೊಳಿಸುವುದು ಮತ್ತು ವಿದ್ಯುತ್ ಚಾಲಿತ ವಾಹನ (ಇವಿ) ಅಳವಡಿಕೆಯನ್ನು ಹೆಚ್ಚಿಸುವ ಬಗ್ಗೆ ಭಾರತದ ಆಟೋಮೋಟಿವ್ ವಲಯದ ಪ್ರಮುಖರು ಸಚಿವಾಲಯದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು.
ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ವಿದ್ಯುತ್ ಚಾಲಿತ ವಾಹನ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಶಕ್ತಿ ತುಂಬವುದು. ಇಂಥ ವಾಹನಗಳನ್ನು ಹೆಚ್ಚು ಬಳಕೆ ಮಾಡುವುದು, ಮಾಲಿನ್ಯಮುಕ್ತ ಪ್ರಚಾರಕ್ಕಾಗಿ ವ್ಯೂಹಾತ್ಮಕ ಕಾರ್ಯತಂತ್ರಗಳು ಹಾಗೂ ಸ್ಥಳೀಯ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸುವ ಮಾರ್ಗೋಪಾಯಗಳ ಕುರಿತು ಸಚಿವರು ಉದ್ಯಮ ಪ್ರತಿನಿಧಿಗಳು ಸಚಿವರ ಗಮನ ಸೆಳೆದರು.
ಸ್ವಚ್ಛ ಚಲನಶೀಲತೆ ಇವತ್ತಿನ ತುರ್ತು ಅಗತ್ಯ. ನಗರ ಪ್ರದೇಶಗಳಲ್ಲಿ ಮೂಲಸೌಕರ್ಯವನ್ನು ಎಲೆಕ್ಟ್ರಿಕ್‌ ವಾಹನ ಕ್ಷೇತ್ರಕ್ಕೆ ಅನುಗುಣವಾಗಿ ಪರಿವರ್ತಿಸುವುದು ಮತ್ತು ಇಂಗಾಲ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಕ್ಷಿಪ್ರಗತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. 5 ಟ್ರಿಲಿಯನ್ ಡಾಲರ್‌ ಆರ್ಥಿಕತೆಯ ಗುರಿಯನ್ನು ಮುಟ್ಟಲು ಆಟೋಮೊಬೈಲ್‌ ಕ್ಷೇತ್ರವನ್ನು ಮಾಲಿನ್ಯಮುಕ್ತ, ಸ್ವಾವಲಂಭಿ ಕ್ಷೇತ್ರವನ್ನಾಗಿ ರೂಪಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಕನಸು. ಈ ನಿಟ್ಟಿನಲ್ಲಿ ಉದ್ಯಮದ ಖಾಸಗಿ ಪಾಲುದಾರರು ನಿರ್ಣಾಯಕ ಹೆಜ್ಜೆಗಳನ್ನು ಇಡಬೇಕಾಗುತ್ತದೆ ಎಂಬ ಅಂಶವನ್ನು ಸಚಿವ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.
ಇಂಗಾಲದ ಶೂನ್ಯ ಹೊರಸೂಸುವಿಕೆ ಗುರಿ ಸಾಧಿಸುವ ಹಿನ್ನೆಲೆಯಲ್ಲಿ ʼಮೇಕ್ ಇನ್ ಇಂಡಿಯಾʼ ಮತ್ತು ʼಆತ್ಮನಿರ್ಭರ ಭಾರತ್‌ʼ ಕಾರ್ಯಕ್ರಮಗಳ ಅಡಿಯಲ್ಲಿ ವೇಗವಾಗಿ ಕೆಲಸ ಮಾಡುವ ಬದ್ಧತೆಯನ್ನು ಬೃಹತ್ ಕೈಗಾರಿಕೆ ಸಚಿವಾಲಯ ಹೊಂದಿದೆ ಎಂದು ತಿಳಿಸಿದ ಸಚಿವರು; ಜಾಗತಿಕ ಸ್ಪರ್ಧಾತ್ಮಕತೆಗೆ ತಕ್ಕಂತೆ ಸ್ಥಳೀಯ ಇವಿ ಕ್ಷೇತ್ರದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿದ್ಯುತ್ ಚಾಲಿತ ವಾಹನ ತಯಾರಿಕೆಗೆ ಅನುಕೂಲವಾಗುವ ಪೂರಕ ವ್ಯವಸ್ಥೆಯನ್ನು ಒದಗಿಸುವ ದಿಕ್ಕಿನಲ್ಲಿಯೇ ಕೇಂದ್ರವು ತನ್ನೆಲ್ಲಾ ನೀತಿಗಳನ್ನು ರೂಪಿಸಿದೆ ಎಂದು ಹೇಳಿದರು.
ಇದೇ ವೇಳೆ FAME I & II, ಆಟೋ PLI, ACC PLI, ಮತ್ತು PM E-ಡ್ರೈವ್‌ನಂತಹ ಯೋಜನೆಗಳ ಅಡಿಯಲ್ಲಿ ಸಾಧಿಸಲಾದ ಪ್ರಗತಿಯನ್ನು ಖಾಸಗಿ ಪಾಲುದಾರರು ಶ್ಲಾಘಿಸಿದರು. ಈ ಉಪಕ್ರಮಗಳು ಭಾರತವು ಜಾಗತಿಕ ಮಟ್ಟದ ವಿದ್ಯುತ್ ಚಾಲಿತ ವಾಹನ ಉತ್ಪಾದನೆ ಮತ್ತು ನಾವೀನ್ಯತಾ ಕೇಂದ್ರವಾಗಿ ಹೊರಹೊಮ್ಮಲು ಬಲವಾದ ಅಡಿಪಾಯವನ್ನು ಹಾಕಿವೆ ಎಂದು ಅಭಿಪ್ರಾಯಪಟ್ಟರು.
ಅಲ್ಲದೆ, ಖಾಸಗಿ ಪಾಲುದಾರರ ಸಲಹೆಗಳನ್ನು ಆಲಿಸಿದ ಸಚಿವರು, ಅವುಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು