11:57 AM Friday28 - November 2025
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ… Bhadravathi | ಪತಿಯ ಕಿರುಕುಳ: ಡೆತ್ ನೋಟ್ ಬರೆದು ನಾಲೆಗೆ ಹಾರಿ ನವ… ವಿದ್ಯುತ್ ಲಿಂಕ್ ಲೈನ್‌ ಸ್ಥಾಪಿಸಿ, ಸಮರ್ಪಕ ವಿದ್ಯುತ್ ಪೂರೈಕೆಗೆ ಆದ್ಯತೆ: ಸಚಿವ ಕೆ.ಜೆ.ಜಾರ್ಜ್ ಹೂವುಗಳ ಹರಾಜು ಪ್ರಕ್ರಿಯೆ ಮಾದರಿಯಲ್ಲಿ ಔಷಧೀಯ ಗಿಡಮೂಲಿಕೆಗಳ ಹರಾಜು ಅವಶ್ಯಕ: ಮುಖ್ಯ ಕಾರ್ಯದರ್ಶಿ… ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ…

ಇತ್ತೀಚಿನ ಸುದ್ದಿ

New Delhi | ಭಾರತೀಯ ಸೇನೆಯಿಂದ ‘ಆಪರೇಷನ್ ಸಿಂಧೂರ್’: ಪಾಕಿಸ್ತಾನದ 9 ಉಗ್ರತಾಣಗಳ ಧ್ವಂಸ

07/05/2025, 13:12

ನವದೆಹಲಿ(reporterkarnataka.com):
ಪಹಲ್ಗಾಮ್ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬುಧವಾರ ಮುಂಜಾನೆ
‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಯಲ್ಲಿ 9 ಕಡೆ ಭಯೋತ್ಪಾದಕರ ಅಡಗುತಾಣದ ಮೇಲೆ ದಾಳಿ ನಡೆಸಿದೆ.
ಉಗ್ರಗಾಮಿ ಸಂಘಟನೆಗಳಾದ ಜೈಶ್-ಎ-ಮೊಹಮ್ಮದ್, ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್‌ಗೆ ಸೇರಿದ ಒಂಬತ್ತು ಭಯೋತ್ಪಾದಕ ಅಡಗುತಾಣಗಳನ್ನು ಗುರುತಿಸಿ ದಾಳಿ ನಡೆಸಲಾಗಿದೆ. ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಭೂಪ್ರದೇಶದೊಳಗೆ 4 ಸ್ಥಳಗಳು ಕೂಡ ಸೇರಿವೆ.ಪಾಕ್ ಆಕ್ರಮಿತ-ಕಾಶ್ಮೀರದಲ್ಲಿ 5 ಕಡೆ ನೆಲೆಗೊಂಡಿದ್ದ ಉಗ್ರರ ಅಡಗುತಾಣಗಳನ್ನು ಕೂಡ ಧ್ವಂಸಗೊಳಿಸಲಾಗಿದೆ.
26 ಜೀವಗಳನ್ನು ಬಲಿ ತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಎರಡು ವಾರಗಳ ನಂತರ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಮಿಲಿಟರಿ ದಾಳಿ ನಡೆಸಲಾಯಿತು.
ಭಾರತೀಯ ಭೂಪ್ರದೇಶದಿಂದ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸಂಘಟಿತ ಪ್ರಯತ್ನಗಳ ಮೂಲಕ ಆಪರೇಷನ್ ಸಿಂದೂರ್’ ಕಾರ್ಯಗತಗೊಳಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು