10:25 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಹೊಸ ಕೈಗಾರಿಕಾ ನೀತಿ: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳ ಸೃಷ್ಟಿ

14/02/2025, 19:05

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಸಚಿವರು ಈ ಸಂದರ್ಭಭದಲ್ಲಿ ಹೇಳಿದರು.


ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ನುಡಿದರು.
ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ, ನಮ್ಮಲ್ಲಿ ಸಂಪನ್ಮೂಲಗಳು ಮಾತ್ರವಲ್ಲದೆ, ಕೌಶಲ್ಯವೂ ಸೇರಿ ಹೂಡಿಕೆದಾರರಿಗೆ ಉತ್ತಮ ವಾತಾವರಣ ಕಲ್ಪಿಸುತ್ತದೆ ಎಂದೂ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸಚಿವ ವಿ.ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌, ಸಚಿವರು, ಶಾಸಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು