3:32 AM Friday19 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಹೊಸ ಕೈಗಾರಿಕಾ ನೀತಿ: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳ ಸೃಷ್ಟಿ

14/02/2025, 19:05

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಸಚಿವರು ಈ ಸಂದರ್ಭಭದಲ್ಲಿ ಹೇಳಿದರು.


ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ನುಡಿದರು.
ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ, ನಮ್ಮಲ್ಲಿ ಸಂಪನ್ಮೂಲಗಳು ಮಾತ್ರವಲ್ಲದೆ, ಕೌಶಲ್ಯವೂ ಸೇರಿ ಹೂಡಿಕೆದಾರರಿಗೆ ಉತ್ತಮ ವಾತಾವರಣ ಕಲ್ಪಿಸುತ್ತದೆ ಎಂದೂ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸಚಿವ ವಿ.ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌, ಸಚಿವರು, ಶಾಸಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು