9:40 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಹೊಸ ಕೈಗಾರಿಕಾ ನೀತಿ: ರಾಜ್ಯದಲ್ಲಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳ ಸೃಷ್ಟಿ

14/02/2025, 19:05

ಬೆಂಗಳೂರು(reporterkarnataka.com): ರಾಜ್ಯ ಸರಕಾರ ಘೋಷಿಸಿರುವ ಹೊಸ ಕೈಗಾರಿಕಾ ನೀತಿಯಿಂದಾಗಿ ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಲಾಗಿದ್ದು, 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.
ಬೆಂಗಳೂರಿನಲ್ಲಿ ಕಳೆದ 3 ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಶೃಂಗಸಭೆಯ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ರಾಜ್ಯ ಸರ್ಕಾರದ 30ಕ್ಕೂ ಮಿಗಿಲು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಟಿಗೊಳ್ಳಲಿದ್ದು ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಏಕಕಿಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದೂ ಸಚಿವರು ಈ ಸಂದರ್ಭಭದಲ್ಲಿ ಹೇಳಿದರು.


ನವೋದ್ಯಮಗಳ ಸ್ಥಾಪನೆಯಲ್ಲಿ ಕರ್ನಾಟಕ ಇಡೀ ರಾಷ್ಟ್ರದಲ್ಲಿಯೇ ಅತ್ಯುನ್ನತ ಸ್ಥಾಯಿಯಲ್ಲಿದ್ದು, ಜೈವಿಕ ತಂತ್ತಜ್ಞಾನ, ನಾವೀನ್ಯತೆ, ಎಂಜನಿಯರಿಂಗ್‌, ಗೆಫೆಕ್ಸ್‌, ಹೆಲ್ತ್‌ಕೇರ್‌ ಮುಂತಾದ ಕ್ಷೇತ್ರಗಳಲ್ಲಿ ಕರ್ನಾಟಕ ಮುಂದಿದೆ ಎಂದೂ ಪ್ರಿಯಾಂಕ್‌ ಖರ್ಗೆ ನುಡಿದರು.
ಜಾಗತಿಕ ಹೂಡಿಕೆದಾರರಿಗೆ ಕರ್ನಾಟಕದಲ್ಲಿ ಎಲ್ಲಾ ಅನುಕೂಲತೆಗಳೂ ಇದ್ದು, ಉದ್ದಿಮೆಗಳ ಸ್ಥಾಪನೆಗೆ ರಾಜ್ಯ ಎಲ್ಲಾ ರೀತಿಯಲ್ಲಿ ಒತ್ತಾಸೆ ನೀಡುತ್ತದೆ, ನಮ್ಮಲ್ಲಿ ಸಂಪನ್ಮೂಲಗಳು ಮಾತ್ರವಲ್ಲದೆ, ಕೌಶಲ್ಯವೂ ಸೇರಿ ಹೂಡಿಕೆದಾರರಿಗೆ ಉತ್ತಮ ವಾತಾವರಣ ಕಲ್ಪಿಸುತ್ತದೆ ಎಂದೂ ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಕೇಂದ್ರ ಸಚಿವ ವಿ.ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌, ಸಚಿವರು, ಶಾಸಕರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು