7:30 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ

23/04/2022, 21:55

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. 

ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್‌ ಪತ್ತೆಯಾಗಿದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎ.10, ಬಿಎ.2, 12 ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಇನ್ನೀದು ದೆಹಲಿ, ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆರಂಭವಾಗಿದೆ. ಇನ್ನು ಕರ್ನಾಟಕದಲ್ಲಿ 3-4 ವಾರಗಳಲ್ಲಿ 4ನೇ ಅಲೆ ಬರುವ ಸಾಧ್ಯತೆಯಿದೆ’ ಎಂದರು.

 ‘ಕೊರೊನಾ 4ನೇ ಅಲೆ 3ನೇ ಅಲೆಯ ಗುಣಲಕ್ಷಣಗಳನ್ನ ಹೊಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುತ್ತದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಇನ್ನೆರೆಡು ವಾರದಲ್ಲಿ ಕೊರೊನಾ ಕೇಸ್‌ ಸಂಖ್ಯೆಯೂ ಹೆಚ್ಚಾಗಲಿದೆ. ಶ್ವಾಸಕೋಶ, ಹೃದ್ರೋಗ, ಕ್ಯಾನ್ಸರ್‌ನಿಂದ ಬಳಲುವವರು ಹುಷಾರಾಗಿರಿ. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇನ್ನು ಜ್ವರ, ಕೆಮ್ಮು ಇದ್ದರೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ. ಕೊರೊನಾ ಲಸಿಕೆ ಪಡೆದಿದ್ದೇವೆಂದು ನಿರ್ಲಕ್ಷ್ಯ ಮಾಡುವುದು ಬೇಡ’ ಎಂದರು.

ಇನ್ನು ‘ಆಸ್ಪತ್ರೆಗೆ ದಾಖಲಾಗುವವರಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‌ ಟೆಸ್ಟಿಂಗ್‌ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೂಪಾಂತರಿ ವೈರಸ್‌ ಹರಡುವುದನ್ನು ತಡೆಯಬಹುದು’ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು