7:31 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಬೆಂಗಳೂರಲ್ಲಿ BA.10, BA.2,12 ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆ; ಮತ್ತೆ ಮಾಸ್ಕ್ ಗೆ ಮೊರೆ

23/04/2022, 21:55

ಬೆಂಗಳೂರು(reporterkarnataka.com):

ರಾಜ್ಯದಲ್ಲಿ ಮತ್ತೆ ಕೊರೊನಾ ಹಾವಳಿ ತಲೆ ಎತ್ತುವ ಮುನ್ಸೂಚನೆಗಳಿವೆ. ಬೆಂಗಳೂರಿನಲ್ಲಿ ಕೊರೊನಾ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. 

ರಾಜಧಾನಿಯಲ್ಲಿ ಬಿಎ.10, ಬಿಎ.2, 12 ಹೊಸ ವೈರಸ್‌ ಪತ್ತೆಯಾಗಿದೆ ಎಂದು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸದಸ್ಯ ಡಾ.ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಬಿಎ.10, ಬಿಎ.2, 12 ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ. ಇನ್ನೀದು ದೆಹಲಿ, ಮುಂಬೈನಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಭಾರತದಲ್ಲಿ ಈಗಾಗಲೇ ಕೊರೊನಾ 4ನೇ ಅಲೆ ಆರಂಭವಾಗಿದೆ. ಇನ್ನು ಕರ್ನಾಟಕದಲ್ಲಿ 3-4 ವಾರಗಳಲ್ಲಿ 4ನೇ ಅಲೆ ಬರುವ ಸಾಧ್ಯತೆಯಿದೆ’ ಎಂದರು.

 ‘ಕೊರೊನಾ 4ನೇ ಅಲೆ 3ನೇ ಅಲೆಯ ಗುಣಲಕ್ಷಣಗಳನ್ನ ಹೊಂದಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರುತ್ತದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ ಚಟುವಟಿಕೆಗಳು ಆರಂಭವಾಗಿದೆ. ಇನ್ನೆರೆಡು ವಾರದಲ್ಲಿ ಕೊರೊನಾ ಕೇಸ್‌ ಸಂಖ್ಯೆಯೂ ಹೆಚ್ಚಾಗಲಿದೆ. ಶ್ವಾಸಕೋಶ, ಹೃದ್ರೋಗ, ಕ್ಯಾನ್ಸರ್‌ನಿಂದ ಬಳಲುವವರು ಹುಷಾರಾಗಿರಿ. ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇನ್ನು ಜ್ವರ, ಕೆಮ್ಮು ಇದ್ದರೆ ಕಡ್ಡಾಯವಾಗಿ ಕೋವಿಡ್‌ ಟೆಸ್ಟ್‌ ಮಾಡಿಸಿಕೊಳ್ಳಿ. ಕೊರೊನಾ ಲಸಿಕೆ ಪಡೆದಿದ್ದೇವೆಂದು ನಿರ್ಲಕ್ಷ್ಯ ಮಾಡುವುದು ಬೇಡ’ ಎಂದರು.

ಇನ್ನು ‘ಆಸ್ಪತ್ರೆಗೆ ದಾಖಲಾಗುವವರಿಗೆ ಕೊವಿಡ್‌ ಟೆಸ್ಟ್‌ ಮಾಡಲಾಗುತ್ತಿದೆ. ರಾಜ್ಯದಲ್ಲಿ ಕೋವಿಡ್‌ ಟೆಸ್ಟಿಂಗ್‌ ಸಂಖ್ಯೆ ಹೆಚ್ಚಿಸುವ ಅಗತ್ಯವಿದೆ. ಇದರಿಂದ ರೂಪಾಂತರಿ ವೈರಸ್‌ ಹರಡುವುದನ್ನು ತಡೆಯಬಹುದು’ ಎಂದು ಸಲಹೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು