6:13 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಹೊಸ ವರ್ಷಾಚಣೆ: ಕಡಲನಗರಿಯಲ್ಲಿ ಬಿಗಿ ಬಂದೋಬಸ್ತ್; 17 ಹೊಯ್ಸಳ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆ

30/12/2023, 23:55

ಮಂಗಳೂರು(reporterkarnataka.com): ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸುರಕ್ಷತೆ ಹಾಗೂ ಭದ್ರತೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಕಲ ರೀತಿಯ ಬಂದೋಬಸ್ತ್ ಮಾಡಲಾಗಿದೆ.
ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಈ ವಿಷಯ ತಿಳಿಸಿದ್ದಾರೆ.
ನಗರದಲ್ಲಿ ಚರ್ಚ್, ಹೊಟೇಲ್, ರೆಸ್ಟೋರೆಂಟ್, ಖಾಸಗಿ ಸಭಾಂಗಣ ಸೇರಿದಂತೆ ಒಳಾಂಗಣಗಳಲ್ಲಿ ಕಾರ್ಯಕ್ರಮ ನಡೆಸಲು ಕೋರಿ 36 ಅರ್ಜಿಗಳು ಬಂದಿವೆ. ಹಲವು ನಿಬಂಧನೆಗಳೊಂದಿಗೆ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದ್ದು, ಒಳಾಂಗಣದಲ್ಲಿ ಕಾರ್ಯಕ್ರಮ ನಡೆಸುವವರು ಮಧ್ಯರಾತ್ರಿ 12.30ರವರೆಗೆ ಅವಕಾಶ ನೀಡಲಾಗುತ್ತಿದೆ ಎಂದರು.
ಬೀಚ್ ಅಥವಾ ಇತರೆಡೆ ಹೊರಾಂಗಣಗಳಲ್ಲಿ ಕಾರ್ಯಕ್ರಮ ನಡೆಸುವವರು 10ಕ್ಕೆ ಮುಕ್ತಾಯಗೊಳಿಸಬೇಕು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂಪೂರ್ಣ ನಿಗಾ ವಹಿಸಲಿದ್ದು, 17 ಹೊಯ್ಸಳ ವಾಹನ ಸೇರಿದಂತೆ 66 ಸೆಕ್ಟರ್ ಮೊಬೈಲ್ ಘಟಕಗಳು ಕಾರ್ಯಾಚರಣೆಯಲ್ಲಿರಲಿವೆ. 106 ಪಾಯಿಂಟ್‌ಗಳಲ್ಲಿ ಎಸಿಪಿ ದರ್ಜೆಯಿಂದ ಹಿಡಿದು ಅಧಿಕಾರಿ, ಸಿಬ್ಬಂದಿ ಮೇಲ್ವಿಚಾರಣೆ ನಡೆಸಲಿದ್ದಾರೆ. ಚೆಕ್‌ಪೋಸ್ಟ್‌ನಲ್ಲಿ ಸಿವಿಲ್ ಹಾಗೂ ಟ್ರಾಫಿಕ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದು, ಮದ್ಯಪಾನ ಮಾಡಿ ವಾಹನ ಚಲಾಯಿಸುವವರು ಸೇರಿದಂತೆ ಅಕ್ರಮ ಚಟುವಟಿಕೆಗಳ ವಿರುದ್ಧ ಕ್ರಮ ವಹಿಸಲಿದ್ದಾರೆ. ಡ್ರಗ್ಸ್ ವಿರುದ್ಧವೂ ನಾಲ್ಕು ತಂಡಗಳು ಕಾರ್ಯಾಚರಿಸಲಿದ್ದು, ಸೇವನೆ ಮತ್ತು ಸಾಗಾಟ- ಮಾರಾಟದ ಮೇಲೆ ನಿಗಾ ವಹಿಸಲಿದ್ದಾರೆ. ಬೀಚ್‌ಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ಆಗದಂತೆ ಮುಂಜಾಗೃತಾ ಕ್ರಮಗಳ ಜತೆಗೆ ಲೈಟಿಂಗ್ ವ್ಯವಸ್ಥೆಗೂ ಕ್ರಮ ವಹಿಸಲಾಗಿದೆ. 112 ಸೇರಿದಂತೆ ಸ್ಥಳೀಯ ಅಧಿಕಾರಿಗಳು ನೇರವಾಗಿ ಸಂಪರ್ಕಕ್ಕೆ ಸಹಕಾರಿ ಆಗುವಂತೆ ಕ್ರಮ ವಹಿಸಲಾಗಿದೆ ಎಂದು ಅವರು ವಿವರ ನೀಡಿದರು.
ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು