4:27 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿ ಕೂಡಲೇ ಜಾರಿಗೆ ತನ್ನಿ: ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

07/10/2021, 07:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದುನಿವೃತ್ತ-ನ್ಯಾಯಾಧೀಶ-ಸದಾಶಿವ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್‌ ಆಗ್ರಹಿಸಿದರು.

ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ , ೨೪ ವರ್ಷಗಳಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಒಳ ಮೀಸಲಾತಿಗಾಗಿ ಸತತ ಹೋರಾಟ ನಡೆಸಲಾಗುತ್ತಿದೆ . ಆದರೆ ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದರು . 

ಅನ್ಯ ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲೂ ಒಳ ಮೀಸಲಾತಿ ಜಾರಿಗೆ ಬರಬೇಕು . ಮಾದಿಗ ದಂಡೋರ ಸಮುದಾಯಕ್ಕೆ ಒಳ ಮೀಸಲಾತಿ ನೀಡುವಂತೆ ಒತ್ತಾಯಿಸಿ ಅ .೧೧ ರಂದು ಬೀದರ್‌ ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ . ಬಂದ್‌ಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಬೇಕು . ಜತೆಗೆ ಬಂದ್ ಸಂದರ್ಭದಲ್ಲಿ ಅಲ್ಲಿ ಹಾಜರಿರಬೇಕು ಎಂದು ಹೇಳಿದರು . 

ಸಂಘಟನೆಯ ಮುಖಂಡರಾದ ಎಂ.ಶ್ಯಾಮ್‌ರಾಜ್ , ಎನ್.ಚಂದ್ರಪ್ಪ , ನಾರಾಯಣಸ್ವಾಮಿ , ಜಿ.ಶಂಕರ್ , ರಾಮಪ್ಪ , ಮುನಿರಾಜು , ಮಂಜುನಾಥ್ , ಶಿವಾನಂದ , ಅನಿಲ್ ಕುಮಾರ್ , ಲಕ್ಷ್ಮಣ , ಪಾಪಣ್ಣ , ಮಂಜುಳ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು