1:43 PM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿ ಕೂಡಲೇ ಜಾರಿಗೆ ತನ್ನಿ: ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

07/10/2021, 07:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದುನಿವೃತ್ತ-ನ್ಯಾಯಾಧೀಶ-ಸದಾಶಿವ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್‌ ಆಗ್ರಹಿಸಿದರು.

ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ , ೨೪ ವರ್ಷಗಳಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಒಳ ಮೀಸಲಾತಿಗಾಗಿ ಸತತ ಹೋರಾಟ ನಡೆಸಲಾಗುತ್ತಿದೆ . ಆದರೆ ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದರು . 

ಅನ್ಯ ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲೂ ಒಳ ಮೀಸಲಾತಿ ಜಾರಿಗೆ ಬರಬೇಕು . ಮಾದಿಗ ದಂಡೋರ ಸಮುದಾಯಕ್ಕೆ ಒಳ ಮೀಸಲಾತಿ ನೀಡುವಂತೆ ಒತ್ತಾಯಿಸಿ ಅ .೧೧ ರಂದು ಬೀದರ್‌ ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ . ಬಂದ್‌ಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಬೇಕು . ಜತೆಗೆ ಬಂದ್ ಸಂದರ್ಭದಲ್ಲಿ ಅಲ್ಲಿ ಹಾಜರಿರಬೇಕು ಎಂದು ಹೇಳಿದರು . 

ಸಂಘಟನೆಯ ಮುಖಂಡರಾದ ಎಂ.ಶ್ಯಾಮ್‌ರಾಜ್ , ಎನ್.ಚಂದ್ರಪ್ಪ , ನಾರಾಯಣಸ್ವಾಮಿ , ಜಿ.ಶಂಕರ್ , ರಾಮಪ್ಪ , ಮುನಿರಾಜು , ಮಂಜುನಾಥ್ , ಶಿವಾನಂದ , ಅನಿಲ್ ಕುಮಾರ್ , ಲಕ್ಷ್ಮಣ , ಪಾಪಣ್ಣ , ಮಂಜುಳ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು