1:07 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿ ಕೂಡಲೇ ಜಾರಿಗೆ ತನ್ನಿ: ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿ ಆಗ್ರಹ

07/10/2021, 07:57

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ
info.reporterkarnataka@gmail.com

ನಿವೃತ್ತ ನ್ಯಾಯಾಧೀಶ ಸದಾಶಿವ ವರದಿಯನ್ನು ಕೂಡಲೆ ಜಾರಿಗೆ ತರುವುದರ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕೆಂದುನಿವೃತ್ತ-ನ್ಯಾಯಾಧೀಶ-ಸದಾಶಿವ ಮಾದಿಗ ದಂಡೋರ ಹಾಗೂ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ರಾಜ್ಯ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಜೆ.ಎಂ.ದೇವರಾಜ್‌ ಆಗ್ರಹಿಸಿದರು.

ಪಟ್ಟಣದ ಮಾದಿಗ ದಂಡೋರ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಾದಿಗ ದಂಡೋರ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ , ೨೪ ವರ್ಷಗಳಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ಒಳ ಮೀಸಲಾತಿಗಾಗಿ ಸತತ ಹೋರಾಟ ನಡೆಸಲಾಗುತ್ತಿದೆ . ಆದರೆ ಸರ್ಕಾರ ಈ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದೆ ಎಂದು ಹೇಳಿದರು . 

ಅನ್ಯ ರಾಜ್ಯಗಳಲ್ಲಿ ಜಾರಿಯಲ್ಲಿರುವಂತೆ ಕರ್ನಾಟಕದಲ್ಲೂ ಒಳ ಮೀಸಲಾತಿ ಜಾರಿಗೆ ಬರಬೇಕು . ಮಾದಿಗ ದಂಡೋರ ಸಮುದಾಯಕ್ಕೆ ಒಳ ಮೀಸಲಾತಿ ನೀಡುವಂತೆ ಒತ್ತಾಯಿಸಿ ಅ .೧೧ ರಂದು ಬೀದರ್‌ ಜಿಲ್ಲಾ ಬಂದ್‌ಗೆ ಕರೆ ನೀಡಲಾಗಿದೆ . ಬಂದ್‌ಗೆ ಎಲ್ಲರೂ ಬೆಂಬಲ ವ್ಯಕ್ತಪಡಿಸಬೇಕು . ಜತೆಗೆ ಬಂದ್ ಸಂದರ್ಭದಲ್ಲಿ ಅಲ್ಲಿ ಹಾಜರಿರಬೇಕು ಎಂದು ಹೇಳಿದರು . 

ಸಂಘಟನೆಯ ಮುಖಂಡರಾದ ಎಂ.ಶ್ಯಾಮ್‌ರಾಜ್ , ಎನ್.ಚಂದ್ರಪ್ಪ , ನಾರಾಯಣಸ್ವಾಮಿ , ಜಿ.ಶಂಕರ್ , ರಾಮಪ್ಪ , ಮುನಿರಾಜು , ಮಂಜುನಾಥ್ , ಶಿವಾನಂದ , ಅನಿಲ್ ಕುಮಾರ್ , ಲಕ್ಷ್ಮಣ , ಪಾಪಣ್ಣ , ಮಂಜುಳ ಇದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು