3:37 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ನಿಡ್ಡೋಡಿ ಚರ್ಚಿನಲ್ಲಿ ಸೌಹಾರ್ದ ಕ್ರಿಸ್ಮಸ್ 2023 ಆಚರಣೆ: ಲೆರೊಯ್ ಪಿಂಟೊ, ಪದ್ಮಶ್ರೀ ಭಟ್ ಸಹಿತ ಸಾಧಕರಿಗೆ ಸನ್ಮಾನ

20/12/2023, 12:47

ಕಟೀಲು(reporterkarnataka.com):ನಿಡ್ಡೋಡಿ ಸಂತ ತೆರಜಮ್ಮ ದೇವಾಲಯ ಕಲ್ಲಮುಂಡ್ಕೂರುನಲ್ಲಿ ಚರ್ಚ್ ಪಾಲಾನ ಸಮಿತಿ, ಅಂತರ್ ಧರ್ಮಿಯ ಸಂವಾದ ಮತ್ತು ಯುವ ಆಯೋಗದ ಜಂಟಿ ಆಶ್ರಯದಲ್ಲಿ ಸರ್ವ ಧರ್ಮಿಯರ ಜೊತೆಗೂಡಿ ಭಾನುವಾರ ಸಂಜೆ 4 ಗಂಟೆಯಿಂದ ಚರ್ಚಿನ ಆವರಣದಲ್ಲಿ ಸೌಹಾರ್ದ ಕ್ರಿಸ್ಮಸ್ 2023 ನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅತಿಥಿಗಳಾಗಿ ಮಾಜಿ ಶಾಸಕರು ಸಚಿವ ಕೆ. ಅಭಯಚಂದ್ರ ಜೈನ್ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರೊನಾಲ್ಡ್ ಸಿಲ್ವನ್ ಡಿಸೋಜ, ಕಲಾವಿದ ಸದಾಶಿವ ಪೂಜಾರಿ, ಅರದಿರಲಿ ಬದುಕು ಆರಾಧನಾ ಸಂಸ್ಥೆಯ ನಿರ್ದೇಶಕಿ ಪದ್ಮಶ್ರೀ ಭಟ್, ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಗಳಿಸಿದ ಲೆರೊಯ್ ಪಿಂಟೊ ಅವರನ್ನು ಸನ್ಮಾನಿಸಲಾಯಿತು. ಚರ್ಚಿನ ಧರ್ಮಗುರುಗಳಾದ ವಂದನೀಯ ಫಾ.ಡೇನಿಸ್ ಸುವಾರಿಸ್ ಸ್ವಾಗತಿಸಿದರು, ಕಾರ್ಯದರ್ಶಿ ಜೀವನ್ ಕ್ರಾಸ್ತಾ ಸನ್ಮಾನ ಕಾರ್ಯಕ್ರಮ ನಡೆಸಿಕೊಟ್ಟರು. ಉಪಾಧ್ಯಕ್ಷರಾದ ಜೆಸಿಂತಾ ಡಿಸೋಜ ವಂದಿಸಿದರು. ರೇಶ್ಮಾ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. ವೇದಿಕೆಯಲ್ಲಿ ಜೋನ್ ಕಾರ್ಡೋಜ, ಭಗಿನಿ ಸಿಸ್ಟರ್ ಸೆವ್ರಿನ್ ಫೆರ್ನಾಂಡಿಸ್, ಕಿಶೋರ್ ಡಿಸೋಜ ಇನ್ನಿತರರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ಕ್ರಿಸ್ಮಸ್ ಕ್ಯಾರಲ್ಸ್ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸರ್ವರಿಗೂ ಕ್ರಿಸ್ಮಸ್ ತಿನಿಸುಗಳನ್ನು ಹಂಚಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು