1:57 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ನಿಧಿಗಾಗಿ ಶೋಧ: ನಿರ್ಜನ ಪ್ರದೇಶದಲ್ಲಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುರುಳರು!

23/06/2023, 12:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ‌ ಗ್ರಾಮದಲ್ಲಿ ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಬೆಳಕಿಗೆ ಬಂದಿದೆ.
ಕೆಸರಿಕೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ಮಾಡಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ.


ನಿಧಿಗಾಗಿ ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಪೂಜೆ ಮಾಡಿದ್ದಾರೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.
ನಿರ್ಜನ ಪ್ರದೇಶದಲ್ಲಿ ಬೆಳಕು ಕಂಡು ಗ್ರಾಮಸ್ಥರು
ಸ್ಥಳಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು
ಎಸ್ಕೇಪ್ ಆಗಿದ್ದಾರೆ. ನಿಧಿಗಾಗಿ ಶೋಧ ನಡೆಸಿದ ಸ್ಥಳದಲ್ಲಿ ಅರಿಶಿಣ-ಕುಂಕುಮ, ಕುಂಬಳಕಾಯಿ, ಕೋಳಿ, ಕಾಯಿ, ಸೇರಿ ವಿವಿಧ ವಸ್ತುಗಳು ಪತ್ತೆಯಾಗಿದೆ.
ಉಡುಪಿ ನೋಂದಣಿ ಸಂಖ್ಯೆ ಇರುವ ಎರಡು ಕಾರಿನಲ್ಲಿ ನಿಧಿ ಶೋಧದ ತಂಡ ಆಗಮಿಸಿತ್ತು ಎಂದು ಗ್ರಾಮಸ್ಥರು ತಿಳಿದ್ದಾರೆ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು