3:42 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಿಧಿಗಾಗಿ ಶೋಧ: ನಿರ್ಜನ ಪ್ರದೇಶದಲ್ಲಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ದುರುಳರು!

23/06/2023, 12:36

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಆಣೂರು ಸಮೀಪದ ಕೆಸರಿಕೆ‌ ಗ್ರಾಮದಲ್ಲಿ ನಿಧಿಗಾಗಿ 15 ಅಡಿ ಅಗಲ, 25 ಅಡಿ ಆಳ ಗುಂಡಿ ತೋಡಿದ ಘಟನೆ ಬೆಳಕಿಗೆ ಬಂದಿದೆ.
ಕೆಸರಿಕೆ ಗ್ರಾಮದ ನಿರ್ಜನ ಪ್ರದೇಶದಲ್ಲಿ ನಿಧಿಗಾಗಿ ಶೋಧ ಮಾಡಲಾಗಿದೆ. 25 ಅಡಿಯಷ್ಟು ಆಳದ ಗುಂಡಿ ತೋಡಿ ನಿಧಿಗಾಗಿ ಶೋಧ ನಡೆಸಲಾಗಿದೆ.


ನಿಧಿಗಾಗಿ ಮಧ್ಯರಾತ್ರಿಯಲ್ಲಿ ಕಿಡಿಗೇಡಿಗಳು ಪೂಜೆ ಮಾಡಿದ್ದಾರೆ. ಗ್ರಾಮದಲ್ಲಿ ನಿಧಿಗಾಗಿ ಶೋಧ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ.
ನಿರ್ಜನ ಪ್ರದೇಶದಲ್ಲಿ ಬೆಳಕು ಕಂಡು ಗ್ರಾಮಸ್ಥರು
ಸ್ಥಳಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಗ್ರಾಮಸ್ಥರು ಸ್ಥಳಕ್ಕೆ ಬರುತ್ತಿದ್ದಂತೆ ಕಿಡಿಗೇಡಿಗಳು
ಎಸ್ಕೇಪ್ ಆಗಿದ್ದಾರೆ. ನಿಧಿಗಾಗಿ ಶೋಧ ನಡೆಸಿದ ಸ್ಥಳದಲ್ಲಿ ಅರಿಶಿಣ-ಕುಂಕುಮ, ಕುಂಬಳಕಾಯಿ, ಕೋಳಿ, ಕಾಯಿ, ಸೇರಿ ವಿವಿಧ ವಸ್ತುಗಳು ಪತ್ತೆಯಾಗಿದೆ.
ಉಡುಪಿ ನೋಂದಣಿ ಸಂಖ್ಯೆ ಇರುವ ಎರಡು ಕಾರಿನಲ್ಲಿ ನಿಧಿ ಶೋಧದ ತಂಡ ಆಗಮಿಸಿತ್ತು ಎಂದು ಗ್ರಾಮಸ್ಥರು ತಿಳಿದ್ದಾರೆ.
ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ
ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು