5:11 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು