2:55 PM Monday8 - June 2026
ಬ್ರೇಕಿಂಗ್ ನ್ಯೂಸ್
ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು… ತೀರ್ಥಹಳ್ಳಿ ತಾಲೂಕಿನ ಫಾರಂ ಹೌಸ್ ನಲ್ಲಿ ಕಳ್ಳತನ: 1 ಲಕ್ಷಕ್ಕೂ ಹೆಚ್ಚು ಮೌಲ್ಯದ… Belagavi | ಅಥಣಿ: ಮಳೆ ಅಬ್ಬರಕ್ಕೆ ನೆಲಕ್ಕುರುಳಿದ ಬೃಹತ್‌ ಕಟ್ಟಡ; ತಪ್ಪಿದ ಭಾರೀ… ಸಿಇಟಿ ಫಲಿತಾಂಶ ಪ್ರಕಟ: ತನಿಷಾ ಕಾರ್ತಿಕ್‌ಗೆ ಇಂಜಿನಿಯರಿಂಗ್‌ನಲ್ಲಿ ಪ್ರಥಮ ರ‍್ಯಾಂಕ್ ಆನೆ ತುಳಿತಕ್ಕೆ ಪತ್ನಿ ಬಲಿ: ಐಪಿಎಸ್ ಅಧಿಕಾರಿ ಸುನಿಲ್ ಅಚ್ಚಯ್ಯಗೆ ಸಿಎಂ ಡಿ… ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:…

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು