3:33 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ನಿಜವಾಯಿತು ಮೈಲಾರ ಸ್ವಾಮೀಜಿ ಮಾತು: ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಆದ್ರು ಮುಖ್ಯಮಂತ್ರಿ!!

28/07/2021, 08:12

ರಾಣಿಬೆನ್ನೂರು(reporterkarnataka news): ರಾಜ್ಯದ ಕಾರಣಿಕ ಕ್ಷೇತ್ರಗಳಲ್ಲೊಂದಾದ ಶ್ರೀ ಮೈಲಾರಲಿಂಗೇಶ್ವರ ಕ್ಷೇತ್ರದ ಸ್ವಾಮೀಜಿ ಅವರ ಮಾತು ಒಂದು ತಿಂಗಳು ಕಳೆಯುವುದರೊಳಗೆ ನಿಜವಾಗಿದೆ. ಸ್ವಾಮೀಜಿಯವರ ಮಾತಿನಂತೆ
ಬಿಜೆಪಿ ಹಿರಿಯ ನಾಯಕ ಬಸವರಾಜ ಬೊಮ್ಮಾಯಿ ಅವರು ಈ ನಾಡಿನ ಮುಖ್ಯಮಂತ್ರಿಯಾಗಿದ್ದಾರೆ.

ಗೃಹ ಸಚಿವರಾಗಿದ್ದ ಬೊಮ್ಮಾಯಿ ಅವರು ಜುಲೈ 18ರಂದು ಶ್ರೀ ಕ್ಷೇತ್ರ ಮೈಲಾರಕ್ಕೆ ಭೇಟಿ ನೀಡಿ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಯ ದರ್ಶನ ಪಡೆದಿದ್ದರು. ಈ ಸಂದರ್ಭದಲ್ಲಿ  ಶ್ರೀ ಕ್ಷೇತ್ರದ ವಂಶಪಾರಂಪರ್ಯ ಧರ್ಮಾಧಿಕಾರಿಗಳು ಕಪಿಲಮುನಿ ಪೀಠದ ಪೀಠಾಧ್ಯಕ್ಷರು ಆದ
 ಶ್ರೀ ಗುರು ವೆಂಕಪ್ಪಯ್ಯ ಒಡೆಯರ್ ಮಹಾಸ್ವಾಮಿಗಳ ಭೇಟಿಯಾಗಿ ಆಶೀರ್ವಾದ ಪಡೆದಿದ್ದರು. ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳು ನೀವು ಮುಂದಿನ ಮುಖ್ಯಮಂತ್ರಿ ಆಗುವಿರಿ ಎಂದು ಬೊಮ್ಮಾಯಿ ಅವರ ತಲೆ ಮೇಲೆ ಕೈಇಟ್ಟು ಆಶೀರ್ವಾದ ಮಾಡಿದ್ದರು. ಇದೀಗ ತಿಂಗಳು ಕಳೆಯುವುದರೊಳಗೆ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು