1:03 PM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ನೀಲೇಶ್ವರ: ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರುಗೆ ‘ಪತ್ರಿಕಾ ದಿನ ಪ್ರಶಸ್ತಿ’ ಪ್ರದಾನ

13/07/2025, 14:40

ಕಾಸರಗೋಡು(reporterkarnataka.com):ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ‘ಪತ್ರಿಕಾ ದಿನ ಪ್ರಶಸ್ತಿ’ಯನ್ನು ಇಂದು ನೀಲೇಶ್ವರದ ತಾಜ್ ಕ್ರೂಸ್ ಬೋಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪ್ರದಾನಿಸಲಾಯಿತು.
ಗಂಗಾಧರ ಪಿಲಿಯೂರು ಅವರು ರಾಜ್ಯಮಟ್ಟದ ಹಲವು ಕನ್ನಡ ದಿನಪತ್ರಿಕೆ, ಸಂಜೆ ಪತ್ರಿಕೆ ಹಾಗೂ ವಾರ ಪತ್ರಿಕೆಗಳಲ್ಲಿ ದುಡಿದು ಅನುಭವ ಹೊಂದಿದ್ದಾರೆ‌. ರಂಗ ಕಲಾವಿದನೂ ಆಗಿರುವ ಅವರು ನಾಟಕ ನಿರ್ದೇಶನ ಕೂಡ ಮಾಡಿದ್ದಾರೆ. ಪತ್ರಿಕಾ ರಂಗದಲ್ಲಿ ಅವರು ನೀಡಿದ ಅನುಪಮ ಸೇವೆಯ ಹಿನ್ನೆಲೆಯಲ್ಲಿ ಅವರಿಗೆ ಪ್ರಶಸ್ತಿ ದೊರೆತಿದೆ.


ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಗಂಗಾಧರ ಪಿಲಿಯೂರು ಅವರ ಪತ್ನಿ ಧನ್ಯಾ ಜಿ. ಪಿಲಿಯೂರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು