7:35 PM Thursday20 - August 2026
ಬ್ರೇಕಿಂಗ್ ನ್ಯೂಸ್
ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ

ಇತ್ತೀಚಿನ ಸುದ್ದಿ

ನೀಲೇಶ್ವರ: ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರುಗೆ ‘ಪತ್ರಿಕಾ ದಿನ ಪ್ರಶಸ್ತಿ’ ಪ್ರದಾನ

13/07/2025, 14:40

ಕಾಸರಗೋಡು(reporterkarnataka.com):ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ‘ಪತ್ರಿಕಾ ದಿನ ಪ್ರಶಸ್ತಿ’ಯನ್ನು ಇಂದು ನೀಲೇಶ್ವರದ ತಾಜ್ ಕ್ರೂಸ್ ಬೋಟ್ ಹೌಸ್ ನಲ್ಲಿ ನಡೆದ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಗಂಗಾಧರ ಪಿಲಿಯೂರು ಅವರಿಗೆ ಪ್ರದಾನಿಸಲಾಯಿತು.
ಗಂಗಾಧರ ಪಿಲಿಯೂರು ಅವರು ರಾಜ್ಯಮಟ್ಟದ ಹಲವು ಕನ್ನಡ ದಿನಪತ್ರಿಕೆ, ಸಂಜೆ ಪತ್ರಿಕೆ ಹಾಗೂ ವಾರ ಪತ್ರಿಕೆಗಳಲ್ಲಿ ದುಡಿದು ಅನುಭವ ಹೊಂದಿದ್ದಾರೆ‌. ರಂಗ ಕಲಾವಿದನೂ ಆಗಿರುವ ಅವರು ನಾಟಕ ನಿರ್ದೇಶನ ಕೂಡ ಮಾಡಿದ್ದಾರೆ. ಪತ್ರಿಕಾ ರಂಗದಲ್ಲಿ ಅವರು ನೀಡಿದ ಅನುಪಮ ಸೇವೆಯ ಹಿನ್ನೆಲೆಯಲ್ಲಿ ಅವರಿಗೆ ಪ್ರಶಸ್ತಿ ದೊರೆತಿದೆ.


ರಾಜ್ಯ ಮಾಹಿತಿ ಆಯುಕ್ತ ಬದ್ರುದ್ದೀನ್ ಮಾಣಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಗಂಗಾಧರ ಪಿಲಿಯೂರು ಅವರ ಪತ್ನಿ ಧನ್ಯಾ ಜಿ. ಪಿಲಿಯೂರು ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು