7:31 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ನಿಲ್ಲದ ಬಿಜೆಪಿ – ಶಿವಸೇನೆ ಜಟಾಪಟಿ; ಮುಖ್ಯಮಂತ್ರಿ ಠಾಕ್ರೆ ವಿರುದ್ಧ ಕಮಲ ಪಾಳಯದಿಂದ ದೂರು ದಾಖಲು

29/08/2021, 16:45

ಮುಂಬೈ(reporterkarnataka.com): ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆ ನಡುವಿನ ಜಗಳ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ವಿವಾದಾತ್ಮಕ ಹೇಳಿಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಶಿವಸೇನೆ ಪ್ರಕರಣ ದಾಖಲಿಸುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಮುಖ್ಯಮಂತ್ರಿ ಈ ಹಿಂದೆ ನೀಡಿದ್ದಾರೆ ಎನ್ನಲಾದ ನಿಂದನಾತ್ಮಕ ಹೇಳಿಕೆ ಸಂಬಂಧಿಸಿದಂತೆ ವಿರುದ್ಧ ದೂರು ನೀಡಲಾಗಿದೆ.

ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಅವರ ಪತ್ನಿ, ‘ಸಾಮ್ನಾ’ ಸಂಪಾದಕಿ ರಶ್ಮಿ ಠಾಕ್ರೆ ಮತ್ತು ಯುವ ಸೇನೆ ಅಧ್ಯಕ್ಷ ವರುಣ್ ಸರ್ದೇಸಾಯಿ ವಿರುದ್ಧ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ. ಠಾಕ್ರೆ ವಿರುದ್ಧ ವಿವಾದಾತ್ಮಕ ಟೀಕೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ನಾರಾಯಣ್ ರಾಣೆ ಅವರನ್ನು ಮಹಾರಾಷ್ಟ್ರದಲ್ಲಿ ಪೊಲೀಸರು ಬಂಧಿಸಿದ ಪ್ರಕರಣದ ಬೆನ್ನಲ್ಲೇ ಈ ದೂರುಗಳು ದಾಖಲಾಗಿದೆ. ಒಟ್ಟು ಮೂರು ದೂರುಗಳು ದಾಖಲಾಗಿದ್ದು, ಬಿಜೆಪಿ ನಾಯಕರು ನಾಸಿಕ್‌ನಲ್ಲಿ ದೂರು ಸಲ್ಲಿಸಿದ್ದಾರೆ. 

ರಿಷಿಕೇಶ್ ಅವರು ಸಿಎಂ  ಉದ್ಧವ್ ಠಾಕ್ರೆ ಹಾಗೂ ವರುಣ್ ಸರ್ದೇಸಾಯಿ ವಿರುದ್ಧ ಮೊದಲ ದೂರು ದಾಖಲಿಸಿದ್ದಾರೆ. ಸರ್ದೇಸಾಯಿ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 153 (ಎ), 107, 212 ಮತ್ತು ಸೈಬರ್ ಅಪರಾಧ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸುನೀಲ್ ರಘುನಾಥ ಕೇದಾರ್ ಅವರು ಎರಡನೆಯ ದೂರು ಉದ್ಧವ್ ಠಾಕ್ರೆ ವಿರುದ್ಧ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಠಾಕ್ರೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಠಾಕ್ರೆ ಮುಖ್ಯಮಂತ್ರಿಯಾಗುವುದಕ್ಕೂ ಮೊದಲು, 2018ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಒಂದು ವಿಡಿಯೋ ವೈರಲ್ ಆಗಿತ್ತು. ಅದರಲ್ಲಿ ಶಿವಾಜಿಯ ಪ್ರತಿಮೆಗೆ ಮಾಲಾರ್ಪಣೆ ಮಾಡುವಾಗ ಪಾದರಕ್ಷೆ ಧರಿಸಿದ್ದ ಯೋಗಿ ಆದಿತ್ಯನಾಥ್​ಗೆ ಅದೇ ಚಪ್ಪಲಿಯಿಂದ ಹೊಡೆಯಬೇಕು ಎಂದು ಠಾಕ್ರೆ ಹೇಳಿದ್ದರು. ಇದನ್ನು ಉಲ್ಲೇಖಿಸಿರುವ ದೂರುದಾರರು, ಆದಿತ್ಯನಾಥ್ ಯುಪಿಯ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಮಾತ್ರವಲ್ಲ, ಗೋರಖ್‌ಪುರ ಮಠದ ಪ್ರಧಾನ ಅರ್ಚಕ ಕೂಡ ಆಗಿದ್ದಾರೆ. ಆದ್ದರಿಂದ ಅನೇಕ ಹಿಂದೂಗಳ ಭಾವನೆಗಳಿಗೆ ಠಾಕ್ರೆ ನಡೆಯಿಂದ ನೋವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶಿವಸೇನೆಯ ಮುಖವಾಣಿ ‘ಸಾಮ್ನಾ’ದಲ್ಲಿ ಬುಧವಾರ ಪ್ರಕಟವಾದ ಸಂಪಾದಕೀಯದಲ್ಲಿ, ರಾಣೆ ವಿರುದ್ಧ ಅನೇಕ ನಿಂದನೀಯ ಪದಗಳನ್ನು ಬಳಸಲಾಗಿದೆ, ಇದು ಅವರು ಹೊಂದಿರುವ ಕೇಂದ್ರ ಸಚಿವರ ಸಾಂವಿಧಾನಿಕ ಹುದ್ದೆಗೆ ‘ಅವಮಾನ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು