7:22 PM Thursday12 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು

28/01/2022, 22:01

ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್‌ ಪುಣಚ ಸವಾಲೆಸೆದರು.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ತೆಗೆಸಿ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದ.ಕ ಜಿಲ್ಲಾ ಶಾಖೆ
ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2013ರ ನಂತರ ಈ ದೇಶ ಒಂದು ಧಾರ್ಮಿಕ ಆಫೀನಲ್ಲಿ ಬೆಳೆದಿತ್ತು. ಅದಕ್ಕೂ ಮೊದಲು ಶಿಕ್ಷಣ ಇಲ್ಲದವರು ಮಾತಿನ ಮೋಡಿಗೆ ಒಳಗಾಗುತ್ತಿದ್ದರು.

ಆದರೆ 2013ರ ನಂತರ ಸುಶಿಕ್ಷಿತರು ಸಹ ಭಾವನಾತ್ಮಕ ಲೋಕದಲ್ಲಿ ತೇಲಾಡುತ್ತಿದ್ದಾರೆ. ನಮ್ಮ ದೇಶ ವಿಶ್ವ ಗುರುವಾಗುತ್ತದೆ, ನಾವು ಇಡೀ ಪ್ರಪಂಚಕ್ಕೆ ಮಾದರಿಯಾಗುತ್ತೇವೆ, ನಮ್ಮ ದೇಶ ಅಭಿವೃದ್ಧಿ ಪಥದತ್ತ ಹೋಗುತ್ತದೆ ಎಂದು ಸೂಲಿಬೆಲೆ ಹುಡುಗ್ರನ್ನು ಹಾಳು ಮಾಡಿ, ತಲೆಕೆಡಿಸಿದ ಎಂದು ಹೇಳಿದರು.

ಅಂಬೇಡ್ಕರ್‌ನನ್ನು ದೇವರಂಥೆ ಪೂಜೆ ದಲಿತ ಸಮುದಾಯವರು ಮಾಡುತ್ತಿದ್ದಾರೆ. ಬಂಟರು, ಬಿಲ್ಲವರು, ಕ್ರಿಶ್ಚಿಯನ್‌, ಗೌಡರು, ಮುಸ್ಲಿಂಮರು ಅಂಬೇಡ್ಕರ್‌ನಿಂದ ನಾವು ಏನೂ ಪಡೆದುಕೊಂಡಿಲ್ಲವೇ ಎಂದು ಅವರು ಪ್ರಶ್ನಿಸಿದರು.

ನಿಮ್ಮಲ್ಲಿ ಸಂಪೂರ್ಣ ಅಧಿಕಾರ ಇದೆ. ನಿಮಗೆ ಧಮ್‌ ಇದ್ರೆ, ತಾಕತ್ತಿದ್ರೆ ಮೀಸಲಾತಿ ತೆರವು ಮಾಡಿ ಎಂದು ಸವಾಲೆಸೆದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಸಂವಿಧಾನವನ್ನು ರಚಿಸಿ,ಅದಕ್ಕೊಂದು ಹೊಸ ರೂಪ ಕೊಟ್ಟುವರು ಅಂಬೇಡ್ಕರ್‌ ಎಂದರು.

ಕಮ್ಯುನಿಸ್ಟ್  ನಾಯಕ ಸುನಿಲ್‌ ಕುಮಾರ್‌ ಬಜಾಲ್‌ ಹಾಗೂ ದಲಿತ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು