6:30 AM Saturday15 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ…

ಇತ್ತೀಚಿನ ಸುದ್ದಿ

ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು

28/01/2022, 22:01

ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್‌ ಪುಣಚ ಸವಾಲೆಸೆದರು.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ತೆಗೆಸಿ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದ.ಕ ಜಿಲ್ಲಾ ಶಾಖೆ
ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2013ರ ನಂತರ ಈ ದೇಶ ಒಂದು ಧಾರ್ಮಿಕ ಆಫೀನಲ್ಲಿ ಬೆಳೆದಿತ್ತು. ಅದಕ್ಕೂ ಮೊದಲು ಶಿಕ್ಷಣ ಇಲ್ಲದವರು ಮಾತಿನ ಮೋಡಿಗೆ ಒಳಗಾಗುತ್ತಿದ್ದರು.

ಆದರೆ 2013ರ ನಂತರ ಸುಶಿಕ್ಷಿತರು ಸಹ ಭಾವನಾತ್ಮಕ ಲೋಕದಲ್ಲಿ ತೇಲಾಡುತ್ತಿದ್ದಾರೆ. ನಮ್ಮ ದೇಶ ವಿಶ್ವ ಗುರುವಾಗುತ್ತದೆ, ನಾವು ಇಡೀ ಪ್ರಪಂಚಕ್ಕೆ ಮಾದರಿಯಾಗುತ್ತೇವೆ, ನಮ್ಮ ದೇಶ ಅಭಿವೃದ್ಧಿ ಪಥದತ್ತ ಹೋಗುತ್ತದೆ ಎಂದು ಸೂಲಿಬೆಲೆ ಹುಡುಗ್ರನ್ನು ಹಾಳು ಮಾಡಿ, ತಲೆಕೆಡಿಸಿದ ಎಂದು ಹೇಳಿದರು.

ಅಂಬೇಡ್ಕರ್‌ನನ್ನು ದೇವರಂಥೆ ಪೂಜೆ ದಲಿತ ಸಮುದಾಯವರು ಮಾಡುತ್ತಿದ್ದಾರೆ. ಬಂಟರು, ಬಿಲ್ಲವರು, ಕ್ರಿಶ್ಚಿಯನ್‌, ಗೌಡರು, ಮುಸ್ಲಿಂಮರು ಅಂಬೇಡ್ಕರ್‌ನಿಂದ ನಾವು ಏನೂ ಪಡೆದುಕೊಂಡಿಲ್ಲವೇ ಎಂದು ಅವರು ಪ್ರಶ್ನಿಸಿದರು.

ನಿಮ್ಮಲ್ಲಿ ಸಂಪೂರ್ಣ ಅಧಿಕಾರ ಇದೆ. ನಿಮಗೆ ಧಮ್‌ ಇದ್ರೆ, ತಾಕತ್ತಿದ್ರೆ ಮೀಸಲಾತಿ ತೆರವು ಮಾಡಿ ಎಂದು ಸವಾಲೆಸೆದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಸಂವಿಧಾನವನ್ನು ರಚಿಸಿ,ಅದಕ್ಕೊಂದು ಹೊಸ ರೂಪ ಕೊಟ್ಟುವರು ಅಂಬೇಡ್ಕರ್‌ ಎಂದರು.

ಕಮ್ಯುನಿಸ್ಟ್  ನಾಯಕ ಸುನಿಲ್‌ ಕುಮಾರ್‌ ಬಜಾಲ್‌ ಹಾಗೂ ದಲಿತ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು