10:50 AM Thursday24 - October 2024
ಬ್ರೇಕಿಂಗ್ ನ್ಯೂಸ್
ವಯನಾಡು ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ; ಬೃಹತ್… ಪಂಚಾಯತ್ ಪಾಲಿಟಿಕ್ಸ್: ಅಧಿಕಾರ, ಅನುದಾನದ ಆಸೆಗೆ ಗ್ರಾಪಂ ಸದಸ್ಯೆಯ ಪತಿಯ ಭೀಕರ ಹತ್ಯೆ:… ಮೂಡಿಗೆರೆ ರೈತ ಭವನದಲ್ಲಿ ಅ.25ರಂದು ವೈವಿಧ್ಯಮಯ ‘ಮಲೆನಾಡು ಹಬ್ಬ’ ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ

ಇತ್ತೀಚಿನ ಸುದ್ದಿ

ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು

28/01/2022, 22:01

ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್‌ ಪುಣಚ ಸವಾಲೆಸೆದರು.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ತೆಗೆಸಿ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದ.ಕ ಜಿಲ್ಲಾ ಶಾಖೆ
ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2013ರ ನಂತರ ಈ ದೇಶ ಒಂದು ಧಾರ್ಮಿಕ ಆಫೀನಲ್ಲಿ ಬೆಳೆದಿತ್ತು. ಅದಕ್ಕೂ ಮೊದಲು ಶಿಕ್ಷಣ ಇಲ್ಲದವರು ಮಾತಿನ ಮೋಡಿಗೆ ಒಳಗಾಗುತ್ತಿದ್ದರು.

ಆದರೆ 2013ರ ನಂತರ ಸುಶಿಕ್ಷಿತರು ಸಹ ಭಾವನಾತ್ಮಕ ಲೋಕದಲ್ಲಿ ತೇಲಾಡುತ್ತಿದ್ದಾರೆ. ನಮ್ಮ ದೇಶ ವಿಶ್ವ ಗುರುವಾಗುತ್ತದೆ, ನಾವು ಇಡೀ ಪ್ರಪಂಚಕ್ಕೆ ಮಾದರಿಯಾಗುತ್ತೇವೆ, ನಮ್ಮ ದೇಶ ಅಭಿವೃದ್ಧಿ ಪಥದತ್ತ ಹೋಗುತ್ತದೆ ಎಂದು ಸೂಲಿಬೆಲೆ ಹುಡುಗ್ರನ್ನು ಹಾಳು ಮಾಡಿ, ತಲೆಕೆಡಿಸಿದ ಎಂದು ಹೇಳಿದರು.

ಅಂಬೇಡ್ಕರ್‌ನನ್ನು ದೇವರಂಥೆ ಪೂಜೆ ದಲಿತ ಸಮುದಾಯವರು ಮಾಡುತ್ತಿದ್ದಾರೆ. ಬಂಟರು, ಬಿಲ್ಲವರು, ಕ್ರಿಶ್ಚಿಯನ್‌, ಗೌಡರು, ಮುಸ್ಲಿಂಮರು ಅಂಬೇಡ್ಕರ್‌ನಿಂದ ನಾವು ಏನೂ ಪಡೆದುಕೊಂಡಿಲ್ಲವೇ ಎಂದು ಅವರು ಪ್ರಶ್ನಿಸಿದರು.

ನಿಮ್ಮಲ್ಲಿ ಸಂಪೂರ್ಣ ಅಧಿಕಾರ ಇದೆ. ನಿಮಗೆ ಧಮ್‌ ಇದ್ರೆ, ತಾಕತ್ತಿದ್ರೆ ಮೀಸಲಾತಿ ತೆರವು ಮಾಡಿ ಎಂದು ಸವಾಲೆಸೆದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಸಂವಿಧಾನವನ್ನು ರಚಿಸಿ,ಅದಕ್ಕೊಂದು ಹೊಸ ರೂಪ ಕೊಟ್ಟುವರು ಅಂಬೇಡ್ಕರ್‌ ಎಂದರು.

ಕಮ್ಯುನಿಸ್ಟ್  ನಾಯಕ ಸುನಿಲ್‌ ಕುಮಾರ್‌ ಬಜಾಲ್‌ ಹಾಗೂ ದಲಿತ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು