12:53 AM Monday18 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ: ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಪುಣಚ ಸವಾಲು

28/01/2022, 22:01

ಮಂಗಳೂರು(reporterkarnataka.com): ಅಧಿಕಾರ ನಿಮ್ಮಲ್ಲಿದೆ. ನಿಮಗೆ ತಾಕತ್ತಿದ್ರೆ, ಧಮ್‌ ಇದ್ರೆ ಮೀಸಲಾತಿ ತೆರವು ಮಾಡಿ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿ ಕಿರಣ್‌ ಪುಣಚ ಸವಾಲೆಸೆದರು.


ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಯಚೂರು ಜಿಲ್ಲಾ ನ್ಯಾಯಧೀಶ ಮಲ್ಲಿಕಾರ್ಜುನ ಗೌಡ. ಅವರು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರ ತೆಗೆಸಿ ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ದ.ಕ ಜಿಲ್ಲಾ ಶಾಖೆ
ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

2013ರ ನಂತರ ಈ ದೇಶ ಒಂದು ಧಾರ್ಮಿಕ ಆಫೀನಲ್ಲಿ ಬೆಳೆದಿತ್ತು. ಅದಕ್ಕೂ ಮೊದಲು ಶಿಕ್ಷಣ ಇಲ್ಲದವರು ಮಾತಿನ ಮೋಡಿಗೆ ಒಳಗಾಗುತ್ತಿದ್ದರು.

ಆದರೆ 2013ರ ನಂತರ ಸುಶಿಕ್ಷಿತರು ಸಹ ಭಾವನಾತ್ಮಕ ಲೋಕದಲ್ಲಿ ತೇಲಾಡುತ್ತಿದ್ದಾರೆ. ನಮ್ಮ ದೇಶ ವಿಶ್ವ ಗುರುವಾಗುತ್ತದೆ, ನಾವು ಇಡೀ ಪ್ರಪಂಚಕ್ಕೆ ಮಾದರಿಯಾಗುತ್ತೇವೆ, ನಮ್ಮ ದೇಶ ಅಭಿವೃದ್ಧಿ ಪಥದತ್ತ ಹೋಗುತ್ತದೆ ಎಂದು ಸೂಲಿಬೆಲೆ ಹುಡುಗ್ರನ್ನು ಹಾಳು ಮಾಡಿ, ತಲೆಕೆಡಿಸಿದ ಎಂದು ಹೇಳಿದರು.

ಅಂಬೇಡ್ಕರ್‌ನನ್ನು ದೇವರಂಥೆ ಪೂಜೆ ದಲಿತ ಸಮುದಾಯವರು ಮಾಡುತ್ತಿದ್ದಾರೆ. ಬಂಟರು, ಬಿಲ್ಲವರು, ಕ್ರಿಶ್ಚಿಯನ್‌, ಗೌಡರು, ಮುಸ್ಲಿಂಮರು ಅಂಬೇಡ್ಕರ್‌ನಿಂದ ನಾವು ಏನೂ ಪಡೆದುಕೊಂಡಿಲ್ಲವೇ ಎಂದು ಅವರು ಪ್ರಶ್ನಿಸಿದರು.

ನಿಮ್ಮಲ್ಲಿ ಸಂಪೂರ್ಣ ಅಧಿಕಾರ ಇದೆ. ನಿಮಗೆ ಧಮ್‌ ಇದ್ರೆ, ತಾಕತ್ತಿದ್ರೆ ಮೀಸಲಾತಿ ತೆರವು ಮಾಡಿ ಎಂದು ಸವಾಲೆಸೆದರು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಸಂವಿಧಾನವನ್ನು ರಚಿಸಿ,ಅದಕ್ಕೊಂದು ಹೊಸ ರೂಪ ಕೊಟ್ಟುವರು ಅಂಬೇಡ್ಕರ್‌ ಎಂದರು.

ಕಮ್ಯುನಿಸ್ಟ್  ನಾಯಕ ಸುನಿಲ್‌ ಕುಮಾರ್‌ ಬಜಾಲ್‌ ಹಾಗೂ ದಲಿತ ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು