4:05 AM Saturday21 - March 2026
ಬ್ರೇಕಿಂಗ್ ನ್ಯೂಸ್
ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ ಲಂಚದೊಂದಿಗೆ ಕಾರಿನಲ್ಲಿ ಪರಾರಿ: 15 ಕಿಮೀ ಬೆನ್ನತ್ತಿ ಸಹಾಯಕ ಔಷಧ ನಿಯಂತ್ರಕಿಯ ಬಂಧಿಸಿದ… ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ

ಇತ್ತೀಚಿನ ಸುದ್ದಿ

ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ 

10/03/2022, 00:06

ಮಂಗಳೂರು(reporterkarnataka.com): ಕೆನರಾ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಸಹಪಾಠಿಗಳಿಗೆ ವಿಪರೀತ ಚೇಷ್ಟೆ ಅಥವಾ ಹೀಯಾಳಿಸುವುದು ಇತ್ಯಾದಿ ಮಾಡಬಾರದು. ಇಂತಹ ಎಷ್ಟೋ ಪ್ರಕರಣಗಳಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ನೀವು ಇನ್ನೊಬ್ಬರ ಸಾವಿಗೆ ಕಾರಣರಾಗಬೇಡಿ ಎಂದರು.

ಮೊಬೈಲ್ ಹಾಗೂ ಇತರ ತಾಂತ್ರಿಕ ಸಾಧನಗಳಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಈ ವಯ್ಯಸ್ಸಿನಲ್ಲಿ ಮನಸ್ಸು ಚಂಚಲವಾಗಿದ್ದು, ಅದನ್ನು ಸ್ತಿಮಿತದಲ್ಲಿಟ್ಟು ಭವಿಷ್ಯದ ಏಳಿಗೆಗೆ ತುಡಿಯುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಅದೇ ರೀತಿ ಸಂಚಾರದ ಸಂದರ್ಭ ಸಾಹಸದ ಬಲೆಗೆ ಬೀಳದೆ ಜಾಗರೂಕರಾಗಿ ದ್ವಿಚಕ್ರ ವಾಹನಗಳನ್ನು ಓಡಿಸಿ, ಹದಿಹರೆಯದ ಆಸೆಗಳಿಗೆ ವಿಪರೀತ ಒತ್ತು ಕೊಟ್ಟು ಜೀವ ಕಳೆದುಕೊಳ್ಳಬೇಡಿ, ನಿಮ್ಮ ಪ್ರಾಣ ನಿಮ್ಮ ಹೆತ್ತ ತಂದೆ ತಾಯಿಗಳ ಭವಿಷ್ಯವನ್ನೆ ಬರಿದುಗೊಳಿಸಬಹುದು ಹಾಗೆಯೆ ದೇಶಕ್ಕೂ ನಷ್ಟವನ್ನು ತಂದೊಡ್ಡಬಹುದು, ಯುವಕರೇ ನಮ್ಮ ದೇಶದ ಆಸ್ತಿಯಾಗಿದ್ದೀರಿ ಎಂದ ಅವರು ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಪರಾಧ ಮಾಡಿ ತಪ್ಪಿಸಿಕೊಂಡರು ಪೋಲಿಸರಗೇನು ನಷ್ಟ ಇಲ್ಲ ಅದರಿಂದ ನಿಮ್ಮ ಅಮೂಲ್ಯ ಜೀವನವೇ ಹಾಳಾಗುತ್ತದೆ ಎನ್ನುವುದನ್ನು ಮಾತ್ರ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಸೀಮಾ ಪ್ರಭು, ವಾಣಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು