9:21 PM Sunday14 - September 2025
ಬ್ರೇಕಿಂಗ್ ನ್ಯೂಸ್
ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ…

ಇತ್ತೀಚಿನ ಸುದ್ದಿ

ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ 

10/03/2022, 00:06

ಮಂಗಳೂರು(reporterkarnataka.com): ಕೆನರಾ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಸಹಪಾಠಿಗಳಿಗೆ ವಿಪರೀತ ಚೇಷ್ಟೆ ಅಥವಾ ಹೀಯಾಳಿಸುವುದು ಇತ್ಯಾದಿ ಮಾಡಬಾರದು. ಇಂತಹ ಎಷ್ಟೋ ಪ್ರಕರಣಗಳಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ನೀವು ಇನ್ನೊಬ್ಬರ ಸಾವಿಗೆ ಕಾರಣರಾಗಬೇಡಿ ಎಂದರು.

ಮೊಬೈಲ್ ಹಾಗೂ ಇತರ ತಾಂತ್ರಿಕ ಸಾಧನಗಳಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಈ ವಯ್ಯಸ್ಸಿನಲ್ಲಿ ಮನಸ್ಸು ಚಂಚಲವಾಗಿದ್ದು, ಅದನ್ನು ಸ್ತಿಮಿತದಲ್ಲಿಟ್ಟು ಭವಿಷ್ಯದ ಏಳಿಗೆಗೆ ತುಡಿಯುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಅದೇ ರೀತಿ ಸಂಚಾರದ ಸಂದರ್ಭ ಸಾಹಸದ ಬಲೆಗೆ ಬೀಳದೆ ಜಾಗರೂಕರಾಗಿ ದ್ವಿಚಕ್ರ ವಾಹನಗಳನ್ನು ಓಡಿಸಿ, ಹದಿಹರೆಯದ ಆಸೆಗಳಿಗೆ ವಿಪರೀತ ಒತ್ತು ಕೊಟ್ಟು ಜೀವ ಕಳೆದುಕೊಳ್ಳಬೇಡಿ, ನಿಮ್ಮ ಪ್ರಾಣ ನಿಮ್ಮ ಹೆತ್ತ ತಂದೆ ತಾಯಿಗಳ ಭವಿಷ್ಯವನ್ನೆ ಬರಿದುಗೊಳಿಸಬಹುದು ಹಾಗೆಯೆ ದೇಶಕ್ಕೂ ನಷ್ಟವನ್ನು ತಂದೊಡ್ಡಬಹುದು, ಯುವಕರೇ ನಮ್ಮ ದೇಶದ ಆಸ್ತಿಯಾಗಿದ್ದೀರಿ ಎಂದ ಅವರು ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಪರಾಧ ಮಾಡಿ ತಪ್ಪಿಸಿಕೊಂಡರು ಪೋಲಿಸರಗೇನು ನಷ್ಟ ಇಲ್ಲ ಅದರಿಂದ ನಿಮ್ಮ ಅಮೂಲ್ಯ ಜೀವನವೇ ಹಾಳಾಗುತ್ತದೆ ಎನ್ನುವುದನ್ನು ಮಾತ್ರ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಸೀಮಾ ಪ್ರಭು, ವಾಣಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು