6:39 AM Saturday16 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ನಿಮ್ಮ ಮಾನಸಿಕ ಒತ್ತಡಗಳನ್ನು ತಂದೆ- ತಾಯಿ, ಆಪ್ತರಲ್ಲಿ ಹಂಚಿಕೊಳ್ಳಿ: ಸಿಐ ಗೋಪಾಲಕೃಷ್ಣ ಭಟ್ 

10/03/2022, 00:06

ಮಂಗಳೂರು(reporterkarnataka.com): ಕೆನರಾ ಕಾಲೇಜ್‌ನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶೇಷ ಜಾಗೃತಿ ಅಪರಾಧ ತಡೆ ಸುರಕ್ಷತಾ ಕ್ರಮಗಳು ಕಾರ್ಯಾಗಾರ ಕಾಲೇಜಿನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕದ್ರಿ ಠಾಣಾ ವೃತ್ತ ನಿರೀಕ್ಷಕರಾದ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ನಿಮ್ಮ ಸಹಪಾಠಿಗಳಿಗೆ ವಿಪರೀತ ಚೇಷ್ಟೆ ಅಥವಾ ಹೀಯಾಳಿಸುವುದು ಇತ್ಯಾದಿ ಮಾಡಬಾರದು. ಇಂತಹ ಎಷ್ಟೋ ಪ್ರಕರಣಗಳಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ನೀವು ಇನ್ನೊಬ್ಬರ ಸಾವಿಗೆ ಕಾರಣರಾಗಬೇಡಿ ಎಂದರು.

ಮೊಬೈಲ್ ಹಾಗೂ ಇತರ ತಾಂತ್ರಿಕ ಸಾಧನಗಳಿಂದ ನಿಮ್ಮ ಜೀವನವನ್ನು ಹಾಳು ಮಾಡಿಕೊಳ್ಳಬೇಡಿ, ಈ ವಯ್ಯಸ್ಸಿನಲ್ಲಿ ಮನಸ್ಸು ಚಂಚಲವಾಗಿದ್ದು, ಅದನ್ನು ಸ್ತಿಮಿತದಲ್ಲಿಟ್ಟು ಭವಿಷ್ಯದ ಏಳಿಗೆಗೆ ತುಡಿಯುವಂತೆ ಮಾಡಬೇಕು ಎಂದು ಕಿವಿ ಮಾತು ಹೇಳಿದರು.

ಅದೇ ರೀತಿ ಸಂಚಾರದ ಸಂದರ್ಭ ಸಾಹಸದ ಬಲೆಗೆ ಬೀಳದೆ ಜಾಗರೂಕರಾಗಿ ದ್ವಿಚಕ್ರ ವಾಹನಗಳನ್ನು ಓಡಿಸಿ, ಹದಿಹರೆಯದ ಆಸೆಗಳಿಗೆ ವಿಪರೀತ ಒತ್ತು ಕೊಟ್ಟು ಜೀವ ಕಳೆದುಕೊಳ್ಳಬೇಡಿ, ನಿಮ್ಮ ಪ್ರಾಣ ನಿಮ್ಮ ಹೆತ್ತ ತಂದೆ ತಾಯಿಗಳ ಭವಿಷ್ಯವನ್ನೆ ಬರಿದುಗೊಳಿಸಬಹುದು ಹಾಗೆಯೆ ದೇಶಕ್ಕೂ ನಷ್ಟವನ್ನು ತಂದೊಡ್ಡಬಹುದು, ಯುವಕರೇ ನಮ್ಮ ದೇಶದ ಆಸ್ತಿಯಾಗಿದ್ದೀರಿ ಎಂದ ಅವರು ಪೋಲಿಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಅಪರಾಧ ಮಾಡಿ ತಪ್ಪಿಸಿಕೊಂಡರು ಪೋಲಿಸರಗೇನು ನಷ್ಟ ಇಲ್ಲ ಅದರಿಂದ ನಿಮ್ಮ ಅಮೂಲ್ಯ ಜೀವನವೇ ಹಾಳಾಗುತ್ತದೆ ಎನ್ನುವುದನ್ನು ಮಾತ್ರ ಮರೆಯಬೇಡಿ ಎಂದು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿದರು.

ಕಾರ್ಯಕ್ರಮದಲ್ಲಿ ಯೋಜನಾಧಿಕಾರಿಗಳಾದ ಸೀಮಾ ಪ್ರಭು, ವಾಣಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು